ಕಲಬುರಗಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಉತ್ತಮ ಆಡಳಿತ ನೀಡುತ್ತಿದ್ದು, ಮುಖ್ಯಮಂತ್ರಿ ಬದಲಾವಣೆ ಮಾತೇ ಉದ್ಬವಿಸುವುದಿಲ್ಲ ಎಂದು ಬೃಹತ ಮತ್ತು ಮದ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಅವರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದರು.
ಮುಂದಿನ ಮುಖ್ಯಮಂತ್ರಿ ನೀವೆ ಎಂಬ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದ ಹಾಗೂ ಸಂಘ ಪರಿವಾರದ ಹಿರಿಯರ ನಿದಾ೯ರಕ್ಕೆ ನಾನು ಬದ್ದನಿದ್ದೇನೆ ಎಂದರು.
ಬಸವರಾಜ ಬೊಮ್ಮಾಯಿ ಅವರ ಒಳ್ಳೆಯ ಆಡಳಿತದಿಂದ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 130ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯಲಿದೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ವಿಚಾರವಾಗಿ ಮಾತನಾಡಿದ ಅವರು, ದೊಡ್ಡವರ ಲೆಕ್ಕದಲ್ಲಿ ಬೆಂಬಲ ನೀಡುವುದರ ಬಗ್ಗೆ ಚಚೆ೯ಗಳು ನಡೆಯುತ್ತಿವೆ. ಹೀಗಾಗಿ ಜೆಡಿಎಸ್ ಬೆಂಬಲ ನೀಡುವುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಮ್ಮ ಪಕ್ಷದ ಮುಖಂಡರು ಅದರ ಬಗ್ಗೆ ನಿಧಾ೯ರ ಮಾಡುತ್ತಾರೆ ಎಂದರು.
ಕಲಬುರಗಿ-ಯಾದಗಿರಿ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಮಾತನಾಡಿ, ಕಳೆದ ಬಾರಿ ಪರಿಷತ್ ಸದಸ್ಯ ನಾಗಿ ನಾನು ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ನನ್ನ ಅವಧಿಯಲ್ಲಿ ಬಂದ ಅನುದಾನವನ್ನು ಎರಡು ಜಿಲ್ಲೆಗೂ ಸಮನಾಗಿ ಹಂಚಿಕೆ ಮಾಡಿ, ಅಭಿವೃದ್ಧಿ ಕೆಲಸ ಮಾಡಿರುವೇ ಎಂದು ತಿಳಿಸಿದರು.
ಕೇರಳ ಮಾದರಿಯಲ್ಲಿ ಗ್ರಾಮ ಪಂಚಾಯತ್, ಗಳನ್ನು ಮಾಡುವುದಕ್ಕೆ ನಮ್ಮ ಸಕಾ೯ರ ಮುಂದಿಗಿದ್ದು, ಗೆದ್ದು ಬಂದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಲಿದೆ ಎಂದರು. ಕಾಂಗ್ರೆಸ್ ನವರು ನನ್ನ ಬಗ್ಗೆ ಸುಳ್ಳಿನ ಪ್ರಚಾರ ಮಾಡುವುದಕ್ಕೆ ಮುಂದಾಗಿದ್ದು, ಜನರು ಎಲ್ಲವನ್ನೂ ಗಮನಿಸಿ, ಸೂಕ್ತ ಅಭ್ಯರ್ಥಿ ಯನ್ನು ಆಯ್ಕೆ ಮಾಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಬಸವರಾಜ ಮತ್ತಿಮಡು, ಅವಿನಾಶ್ ಜಾಧವ, ಸುನೀಲ ವಲ್ಯಾಪುರ, ನಗರ ಅಧ್ಯಕ್ಷ ಸಿದ್ದಾಜೀ ಪಾಟೀಲ್, ಗ್ರಾ,ಅಧ್ಯಕ್ಷ ಶಿವರಾಜ್ ಪಾಟೀಲ್ ಇದ್ದರು.