News Karnataka Kannada
Tuesday, May 07 2024
ಕಲಬುರಗಿ

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಹಣ ಪಡೆದ ಬಗ್ಗೆ ಒಪ್ಪಿಕೊಂಡ ದಿವ್ಯಾ ಹಾಗರಗಿ

Divya
Photo Credit :

ಕಲಬುರಗಿ:  ಪಿಎಸ್ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆಸಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಮಾಹಿತಿ ಬಿಚ್ಚಿಟ್ಟಿದ್ದಾಳೆ.

ದಿವ್ಯಾ ಹಾಗರಗಿ ಒಡೆತನದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪರೀಕ್ಷಾ ಅಕ್ರಮದಲ್ಲಿ ಎರಡು ಟೀಂಗಳಿಂದಲೂ ದೊಡ್ಡ ಮೊತ್ತದ ಹಣವನ್ನು ಪಡೆದ ಬಗ್ಗೆ ಪೊಲೀಸ್‌ ವಿಚಾರಣೆಯಲ್ಲಿ ಮಾಹಿತಿ ನೀಡಿದ್ದಾಳೆ.

ಆರ್.ಡಿ.ಪಾಟೀಲ್ ಮತ್ತು ಮಂಜುನಾಥ್ ಗ್ಯಾಂಗ್ ನಿಂದ ದೊಡ್ಡ ಮಟ್ಟದ ಹಣ ಸಂದಾಯ ಮಾಡಿಸಿದ್ದು, ಆರ್‌ಡಿ‌ಪಾಟೀಲ ಮತ್ತು ಮಂಜುನಾಥ್ ಬಳಿಯಿಂದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ್ ಹಣವನ್ನು ಕೊಡಿಸಿದ್ದನು ಎಂದು ಬಾಯಿ ಬಿಟ್ಟಿದ್ದಾಳೆ.

ದಿವ್ಯಾ ಹಾಗರಗಿ, ಆರ್.ಡಿ.ಪಾಟೀಲ್, ಮಂಜುನಾಥ್ ಮಧ್ಯೆ ಮಧ್ಯವರ್ತಿ ಯಾಗಿ ಕಾಶಿನಾಥ್ ಕೆಲಸ ಮಾಡುತ್ತಿದ್ದನು.ಇದರ ಜೊತೆಗೆ ಕಾಶಿನಾಥ್ ಕೂಡ ಅಕ್ರಮದಲ್ಲಿ ದೊಡ್ಡ ಪ್ರಮಾಣದಲ್ಲಿ ಮೊತ್ತವನ್ನು ಪಡೆದಿರುವುದು ಬೆಳಕಿಗೆ ಬಂದಿದೆ.
ಸದ್ಯ ಪ್ರಕರಣವು ಬೆಳಕಿಗೆ ಬರುತ್ತಿದ್ದಂತೆ ಕಾಶಿನಾಥ್ ತಲೆಮರೆಸಿಕೊಂಡಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು