Categories: ಕಲಬುರಗಿ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ರೂವಾರಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ‌ಬಂಧನ

 ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ರೂವಾರಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ‌ಮತ್ತು ಟೀಂ ಕಡೆಗೂ ಸಿಐಡಿ ಬಲೆಗೆ ಬಿದ್ದಿದ್ದಾಳೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ 5 ಜನರನ್ನು ಬಂಧಿಸಿ ಕಲಬುರ್ಗಿಗೆ ಕರೆತರಲಾಗುತ್ತಿದೆ.

ಪುಣೆಯಲ್ಲಿ ದಿವ್ಯಾ ಅಂಡ್ ಟೀಮ್ ಇದೆ ಅನ್ನುವುದನ್ನು ಪತ್ತೆ ಹಚ್ಚಿದ ಸಿಐಡಿ ತಂಡ, ಕಾರ್ಯಾಚರಣೆ ನಡೆಸಿ ದಿವ್ಯಾ ಮತ್ತು ಮೇಲ್ವಿಚಾರಕಿ ಅರ್ಚನಾ ಸೇರಿ ಐವರನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಕಲಬುರ್ಗಿಗೆ ಕರೆತರಲಾಗುತ್ತಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಕಲಬುರ್ಗಿ ಸಿಐಡಿ ಕಚೇರಿಗೆ ತಲುಪಲಿದ್ದಾರೆ..

ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ಕಾರ್ಯದರ್ಶಿಯಾದ ಬಿಜೆಪಿ ಜಿಲ್ಲಾ ನಾಯಕಿ ದಿವ್ಯಾ ಹಾಗರಗಿ ಹಾಗೂ ಟೀಂ ಪಿಎಸ್ಐ ಅಕ್ರಮ ಹೊರಬಿಳುತ್ತಿದ್ದಂತೆ ತಲೆಮರೆಸಿಕೊಂಡಿದ್ದರು. ಸಿಐಡಿ ಸಾಕಷ್ಟು ಶೋಧ ಕಾರ್ಯ ನಡೆಸಿದರೂ ಪತ್ತೆಯಾಗಿರಲಿಲ್ಲ, ಬಂಧನ ಕ್ಕಾಗಿಯೇ ವಿಶೇಷ ತಂಡಗಳನ್ನು ರಚಿಸಲಾಗಿತ್ತು.. ಕಡೆಗೂ 18 ದಿನಗಳ ನಂತರ ಖಾಕಿ ಖೆಡ್ಡಾಕೆ ಬಿದ್ದಿದ್ದಾರೆ.

ಜ್ಞಾನಜ್ಯೋತಿ ಶಾಲೆಯ ಕಾರ್ಯದರ್ಶಿ ದಿವ್ಯಾ ಹಾಗರಗಿ, ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್, ಮೇಲ್ವಿಚಾರಕಿ ಅರ್ಚನಾ, ಸುನಂದಾ, ಪಿಎಸ್ಐ ಪರೀಕ್ಷಾರ್ಥಿ ಅಭ್ಯರ್ಥಿ ಶಾಂತಾಬಾಯಿ ಬಂಧನಕ್ಕೆ ಒಳಗಾಗಿದ್ದಾರೆ.

ನಿನ್ನೆ ಆರೋಪಿ ಜ್ಯೋತಿ ಪಾಟೀಲ್ ಬಂಧನವಾಗಿತ್ತು. ವಿಚಾರಣೆ ವೇಳೆ ದಿವ್ಯಾ ಸೇರಿ ಎಲ್ಲರು ಮಹಾರಾಷ್ಟ್ರದ ಪುಣೆಯಲ್ಲಿ ತಲೆಮರೆಸಿಕೊಂಡಿರುವದನ್ನು ಜ್ಯೋತಿ ಪಾಟೀಲ್ ಬಾಯ್ಬಿಟ್ಟಿದ್ದಳು. ತಡ ಮಾಡದೆ ರಾತ್ರಿಯೇ ಪುಣೆಗೆ ತೆರಳಿದ ಸಿಐಡಿ ತಂಡ, ರಾತ್ರಿ ಶೋಧ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Sneha Gowda

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

22 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

39 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago