News Karnataka Kannada
Tuesday, May 07 2024
ಕಲಬುರಗಿ

ಪಿಎಸ್‌ಐ ನೇಮಕಾತಿ ಹಗರಣ: ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದೆ- ಆರಗ ಜ್ಞಾನೇಂದ್ರ

Complaint filed against Araga Gyanendra for comments on Kharge's complexion
Photo Credit :

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಕೈ ಹಾಕಿರುವರು ಇನ್ನೊಮ್ಮೆ ಮುಟ್ಟಿಕೊಳ್ಳಬೇಕು. ಯಾರೇ ಎಷ್ಟೋ ದೊಡ್ಡವರಿದ್ದರೂ ಸರ್ಕಾರ ಬಿಡುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಗುಡುಗಿದರು. ಪೊಲೀಸ್ ತರಬೇತಿ ಪ್ರರಿಕ್ಷಣಾರ್ಥಿಗಳ ನಿರ್ಗಮನ ಪಂಥ ಸಂಚಲನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಪಿಎಸ್‌ಐ ನೇಮಕಾತಿ ಹಗರಣವನ್ನು ಸರ್ಕಾರ ಬೇರು ಮಟ್ಟದ ತನಿಖೆ ನಡೆಸುತ್ತಿದ್ದು, ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಪುನರುಚ್ಚರಿಸಿದ ಸಚಿವರು, ಕಾಂಗ್ರೆಸ್ ನವರು ಸರಕಾರದ ಕೆಲ ಸಚಿವರ ತೇಜೋವಧೆ ಮಾಡುತ್ತಿದ್ದಾರೆ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ಹಗರಣದಲ್ಲಿ ಪಾಲ್ಗೊಂಡವರ ವಿರುದ್ದ ಇದುವರೆಗೆ ‌ಕಂಡರಿಯದ ನಿಟ್ಟಿನಲ್ಲಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣದಲ್ಲಿ 300 ಕೋಟಿ ಅಲ್ಲ 3000 ಕೋಟಿ ಆರೋಪ ಮಾಡಲಿ. ಮಾತಾಡಲು ಅವರಿಗೆ ವಾಕ್ ಸ್ವಾತಂತ್ರವಿದೆ. ದಾಖಲಾತಿ ಕೊಡಿ ಎಂದರೆ ಕಾಂಗ್ರೆಸ್ ಅವರು ಓಡಿಹೋಗುತ್ತಾರೆ. ಈ ಪ್ರಕರಣದಲ್ಲಿ ಬಹುತೇಕ ಸಿಲುಕಿದವರೇ ಕಾಂಗ್ರೆಸ್ ನವರು. ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ವಿವರಣೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು