News Karnataka Kannada
Tuesday, April 30 2024
ಕಲಬುರಗಿ

ಪಿ.ಎಸ್.ಐ ನೇಮಕಾತಿಗೆ ತಡೆ, ಈ ಕುರಿತು ಅಧ್ಯಯನಕ್ಕೆ ಸಮಿತಿ ರಚನೆ : ಗೃಹ ಸಚಿವ ಆರಗ ಜ್ಞಾನೇಂದ್ರ

Aaraga Jnanendra
Photo Credit :

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.

ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಸದರಿ ಸಮಿತಿಯಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿಗಳು, ಡಿ.ಪಿ.ಎ.ಆರ್. ಕಾರ್ಯದರ್ಶಿ ಹಾಗೂ ಡಿ.ಜಿ.ಪಿ ಅವರು ಸಹ ಇರಲಿದ್ದಾರೆ ಎಂದರು.

ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸ್ವಚ್ಛತೆ ಮತ್ತು ಶೌಚಾಲಯ ನಿರ್ವಹಣೆಗೆ ಗುತ್ತಿಗೆ ಅಧಾರದ ಮೇಲೆ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು