Categories: ಕಲಬುರಗಿ

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ: ಸ್ನೇಹಲ್ ಲೋಖಂಡೆ ಐಎಎಸ್ ಅಧಿಕಾರಿ ವಿರುದ್ಧ ದೂರು

ಕಲಬುರಗಿ: ಕಲಬುರಗಿ ‌ಮಹಾನಗರ ಪಾಲಿಕೆ ಆಯುಕ್ತ ಐಎಎಸ್ ಅಧಿಕಾರಿ ಸ್ನೇಹಲ್‌ ಲೋಖಂಡೆ ವಿರುದ್ಧ ಲವ್,ಸೆಕ್ಸ್, ದೋಖಾ ಗಂಭೀರ ಆರೋಪ ಕೇಳಿಬಂದಿದೆ.

2017ರ ಬ್ಯಾಚ್ ಐಎಎಸ್ ಅಧಿಕಾರಿ ಆಗಿರುವ ಸ್ನೇಹಲ್‌ ಲೋಖಂಡೆ ಅವರು, ಸದ್ಯ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದಾರೆ. ತಮ್ಮ ಟ್ರೇನಿಂಗ್ ವೇಳೆ 2019ರಲ್ಲಿ ದೆಹಲಿ‌ ಮೂಲದ ಯುವತಿಯೊಂದಿಗೆ ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡು ಸಲುಗೆ ಬೆಳಸಿಕೊಂಡಿದ್ದರು. ಮದುವೆಯಾಗುವದಾಗಿ ನಂಬಿಸಿ ಲಾಡ್ಜ್ ಹಾಗೂ ರೂಂ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆಂದು ಯುವತಿ ಆರೋಪಿಸಿದ್ದಾಳೆ. ನಂತರ ಐಪಿಲ್ ಮಾತ್ರೆ ನುಂಗಲು ಸ್ನೇಹಲ್ ಲೋಖಂಡೆ ಹೇಳಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಯುವತಿ ತನ್ನ ಪೊಷಕರಿಗೆ ಈ ವಿಷಯ ತಿಳಿಸಿದಾಗ, ಆಕೆಯ ಪೊಷಕರು ಸ್ನೇಹಲ್ ಲೋಖಂಡೆ ಅವರ ಕುಟುಂಬಸ್ಥರ ಗಮನಕ್ಕೆ ತಂದಿದ್ದಾರೆ. ಮಾತನಾಡಿ ಎಲ್ಲವು ಸರಿಪಡಿಸುವದಾಗಿ ಭರವಸೆ ನೀಡಿದ ಸ್ನೇಹಲ್ ತಂದೆಯವರು, ಇದುವರೆಗೆ ಏನು ಕ್ರಮ ಕೈಗೊಂಡಿಲ್ಲ ಎಂದು ಅಳಲು ತೊಡಿಕೊಂಡ ಯುವತಿ, ಸ್ನೇಹಲ್ ಲೋಖಂಡೆಯಿಂದ ನನ್ನ ಜೀವನ ಹಾಳಾಗಿದೆ ನ್ಯಾಯ ಒದಗಿಸಿ ಅಂತ ಮನವಿ ಮಾಡಿದ್ದಾಳೆ.

ಅಶ್ಲಿಲ್ ಚಾಟ್ ಮಾಡಿರುವ ಸ್ಕ್ರೀನ್ ಶಾಟ್ ತೆಗೆದು ಯುವತಿ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾಳೆ. ಈ ಬಗ್ಗೆ ಟ್ವೀಟರ್ ನಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಚಿವೆ ಸ್ಮ್ತುತಿ ಇರಾನಿ, ಸಿಎಂ ಬಸವರಾಜ ಬೊಮ್ಮಾಯಿ, ಕಲಬುರಗಿ ಉಸ್ತುವಾರಿ ಮುರುಗೇಶ ನಿರಾಣಿಗೆ ಟ್ವೀಟರ್ ಮೂಲಕ ದೂರು ನೀಡಿದ್ದಾಳೆ.

ಕರ್ನಾಟಕ ಮುಖ್ಯ ಕಾರ್ಯದರ್ಶಿಗೂ ಯುವತಿ ದೂರು ನೀಡಿದ್ದು, ದೂರು ನೀಡಿ ಒಂದು ವಾರ ಕಳೆದ್ದರೂ ಕ್ರಮ ಕೈಗೊಂಡಿಲ್ಲ, ಆದರೇ, ಸ್ನೇಹಲ್ ಲೋಖಂಡೆ ಈ ಆರೋಪವನ್ಮು ತಳ್ಳಿಹಾಕಿದ್ದಾರೆ. ಯುವತಿ ಪರಿಚಯವಷ್ಟೆ, ಆದರೆ ಅವಳು ಮಾಡಿರುವ ಆರೋಪಗಳು ಸುಳ್ಳು, ಯುವತಿ ವಿರುದ್ಧ ದೂರು ನೀಡುವದಾಗಿ ಹೇಳಿದ್ದಾರೆ.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

4 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

4 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

4 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

5 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

5 hours ago