News Karnataka Kannada
Sunday, April 28 2024
ಕಲಬುರಗಿ

ಲಾಕ್‌ಡೌನ್ , ಸೆಮಿ ಲಾಕ್‌ಡೌನ್ ಬಗ್ಗೆ ತಜ್ಞರ ಸಭೆಯ ನಂತರ ತೀರ್ಮಾನ : ಸಿಎಂ ಬೊಮ್ಮಾಯಿ

Basavaraj Bommai
Photo Credit :

ಕಲಬುರಗಿ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋರೋನಾ ಮತ್ತು ಓಮಿಕ್ರಾನ ವರದಿಗಳು ಹೆಚ್ಚಾಗುತ್ತಿದ್ದು,ಬರವಂತಹ ದಿನಗಳಲ್ಲಿ ತಜ್ಞರ ಜೊತೆಗೆ ನಡೆಯುವ ಸಭೆಯ ಬಳಿಕವೇ ಲಾಕ್ ಡೌನ ಮತ್ತು ಸೆಮಿ ಲಾಕ್ ಡೌನ್ ಬಗ್ಗೆ ಅಂತಿಮವಾಗಿ ತೀಮಾ೯ನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಇಂದು ಸಾಯಂಕಾಲ ಕೋವಿಡ ಬಗ್ಗೆ ಸಭೆ ಮಾಡಲಿದ್ದೆವೆ. ಟಾಸ್ಕ ಪೋಸ೯ ಕಮಿಟಿ ಸದಸ್ಯರು ಇರಲಿದ್ದಾರೆ ಎಂದು ತಿಳಿಸಿದರು.

ಕೋರೋನಾ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಭಾರತ ಸರಕಾರ ಅನೇಕ ಮಾಗ೯ದಶ೯ನ ನೀಡಿದೆ.ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚಾಗಿದೆ.ಪಕ್ಕದ ರಾಜ್ಯದಲ್ಲಿ ಹೆಚ್ಚಾದಾಗ ನಮ್ಮ ರಾಜ್ಯದಲ್ಲಿ ಹೆಚ್ಚಾಗುತ್ತದೆ. ಇದರ ಬಗ್ಗೆ ಕಟ್ಟೆಚ್ಚರ ವಹಿಸಿ, ಗಡಿಗಳನ್ನು ಬಿಗಿ ಮಾಡಲಾಗಿದೆ ಎಂದರು.

ಔಷದಿ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.ರಾಜ್ಯದಲ್ಲಿ ಶಾಲೆಗಳ ರಜೆಯ ಬಗ್ಗೆ ಉನ್ನತ ಮಟ್ಟದ ತಜ್ಞರ ಜೊತೆಗೆ ಮಾತಾಡಿ,ಅವರು ಎನೂ ಹೇಳುತ್ತಾರೆಯೋ,ಕೇಳಿ ತಿಮಾ೯ನ ಮಾಡಲಾಗುವುದು ಎಂದರು.

ಈ ಸಮಯದಲ್ಲಿ ಜನರ ಸಹಕಾರ ಕೂಡಾ ಅಗತ್ಯ ಇದೆ.ಜನ ಸಹಕಾರ ನೀಡಿದರೇ,ಕೋವಿಡ ನಿಯಂತ್ರಣ ಮಾಡಬಹುದು. ಗಡಿಯಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದರು.

ರಾಮನಗರ ಜಿಲ್ಲೆಯಲ್ಲಿ ವೇದಿಕೆ ಮೇಲೆ ಡಿ.ಕೆ.ಸುರೇಶ್, ಅಶ್ವಥ್ ನಾರಾಯಣ ಗಲಾಟೆ ಬಗ್ಗೆ ಮಾತನಾಡಿದ ಅವರು,ಇದು ಕನಾ೯ಟಕದ ಸಂಸ್ಕೃತಿ ಅಲ್ಲಾ,ಮಾತಿನಿಂದ ನಮ್ಮ ವಿಚಾರವನ್ನು ಹೇಳಬಹುದು ಎಂದರು. ಆದರೆ ಈ ರೀತಿ ವತ೯ನೆ ಸರಿಯಾಗಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು