ಕಲಬುರಗಿ: ವಿಧಾನ ಪರಿಷತ್ ಚುನಾವಣೆಗೆ ಇನ್ನು ಕೆಲವೇ ಗಂಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಕಡೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಾರೆ.ಯಾರಾದರೂ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿದರೆ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುತ್ತೇವೆ. ಎರಡು ಸ್ಥಾನಗಳು ಇರುವ ಕಡೆ ಒಬ್ಬರೇ ಅಭ್ಯರ್ಥಿ ಹಾಕುತ್ತಿದ್ದೇವೆ ಎಂದರು.
ಕಾಂಗ್ರೆಸ್ ನಲ್ಲಿ ಯಾವುದೇ ಬಣಗಳು ಇಲ್ಲ. ಇರುವುದು ಒಂದೇ ಕಾಂಗ್ರೆಸ್ ಬಣ. ನಮ್ಮ ಬಗ್ಗೆ ಬಿಜೆಪಿಯವರಿಗೆ ಮಾತನಾಡದಿದ್ದರೆ ನಿದ್ರೆ ಬರುವುದಿಲ್ಲ. ಹೀಗಾಗಿ ಪ್ರತಿನಿತ್ಯ ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದರು.
ಮಳೆಯಿಂದ ತತ್ತರಿಸಿದವರಿಗೆ ಮೊದಲು ಸರ್ಕಾರ ಪರಿಹಾರ ನೀಡಬೇಕು. ಹಣ ಬಿಡುಗಡೆ ಮಾಡಬೇಕು. ಕಾಂಗ್ರೆಸ್ ನಿಂದ ಕೂಡ ರೈತರು ಮತ್ತು ಜನರ ನೋವು ಕೇಳುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಕಮಿಷನ್ ಕುರಿತು ಗುತ್ತಿಗೆದಾರರಿಂದ ಪ್ರಧಾನಿ ಮೋದಿಗೆ ಪತ್ರ ವಿಚಾರದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಈ ಕುರಿತು ನಾವು ಕೂಡ ನಾಮಪತ್ರ ಸಲ್ಲಿಕೆ ಮುಗಿದ ನಂತರ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ದೇಶದ ಅತಿ ಭ್ರಷ್ಟ ಸರ್ಕಾರವಿದರೆ ಅದು ಕರ್ನಾಟಕ ಸರ್ಕಾರ ಮಾತ್ರ ಟೀಕಿಸಿದರು.