ಕಲಬುರಗಿ, ;ಸಾಫ್ಟ್ ಕಾರ್ನರ್ ಅವಶ್ಯಕತೆ ನನಗಿಲ್ಲ. ನಾನು ಬಿಜೆಪಿ ಪರವಾಗಿ ಇಲ್ಲ. ಕಾಂಗ್ರೆಸ್ ಪರವಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಹಾನಗರ ಪಾಲಿಕೆ ಚುನಾವಣಾ ಪ್ರಚಾರಕ್ಕಾಗಿ ಸೋಮವಾರ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಅಧ್ಯಕ್ಷರು ನನ್ನ ಬಗ್ಗೆ ಯಡಿಯೂರಪ್ಪ ಪರವಾಗಿ ಸಾಫ್ಟ್ ಕಾರ್ನರ್ ಮಾತುಗಳನ್ನು ಹೇಳಿದ್ದಾರೆ. ಆದರೆ ನಮಗೆ ಸಾಫ್ಟ್ ಕಾರ್ನರ್ ಅವಶ್ಯಕತೆಯಿಲ್ಲ ಎಂದರು.ಕೋವಿಡ್ ಕಾರಣ ಹೋರಾಟ ಮಾಡಲಾಗಿಲ್ಲ. ಅವಶ್ಯಕತೆ ಬಂದಾಗ ಹೋರಾಟಕ್ಕೆ ಧುಮಕುತ್ತಿವೆ. ಕಾಂಗ್ರೆಸ್ ನಾಯಕರು ಪ್ರತಿನಿತ್ಯ ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಅವಧಿಯಲ್ಲಿ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.
ರಾಜಕಾರಣದಲ್ಲಿ ಇತ್ತೀಚೆಗೆ ಸಿದ್ಧಾಂತಗಳಲ್ಲಿ ಬೆನ್ನು ತಟ್ಟಿಕೊಳ್ಳುವ ಸ್ಥಿತಿ ಇಲ್ಲ. ಮೈಸೂರು ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರೇ ನಮ್ಮ ಜೊತೆ ಮೈತ್ರಿಗೆ ಸಿದ್ದರಿರಲಿಲ್ಲ. ಕಲಬುರಗಿ ಪಾಲಿಕೆಯಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಮುಂದೆ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ಮುಂದೆ ನಿರ್ಧರಿಸುತ್ತೇವೆ ಎಂದರು.ಇನ್ನು ಯಡಿಯೂರಪ್ಪ ಪಕ್ಷ ಸಂಘಟನೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಅವರು, ಅದು ತಪ್ಪು ಅಂತ ಹೇಳಲ್ಲಾ, ಅದರ ಬಗ್ಗೆ ಸಣ್ಣದಾಗಿ ನಾನು ಮಾತನಾಡಲ್ಲ ಎಂದರು. ಕೋವಿಡ್ ರೂಲ್ಸ್ ಪಾಲಿಸಬೇಕು ಅಂತಾರೆ. ಆದರೆ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದರಿಂದ ಚುನಾವಣೆ ಅನಿವಾರ್ಯ ಎಂದು ಹೇಳಿದರು.
ಜೆಡಿಎಸ್ ಪಕ್ಷ ತೆರೆದ ಬಾಗಿಲಿದ್ದಂತೆ. ಹೋಗುವವರು ಹೋಗಲಿ, ಬರುವವರು ಬರಲಿ. ಆದರೆ, ಪಕ್ಷ ಬಿಟ್ಟು ಹೋಗಿ ಎಂದು ಹೇಳುವಷ್ಟು ದುರಹಂಕಾರ ಮಾತ್ರ ಇಲ್ಲ ಎಂದು ಪರೋಕ್ಷವಾಗಿ ಜಿ.ಟಿ ದೇವೆಗೌಡರಿಗೆ ಟಾಂಗ್ ಕೊಟ್ಟರು. ಕಾಂಗ್ರೆಸ್ ಸೇರುವ ಬಗ್ಗೆ ಜಿ.ಟಿ.ದೇವೇಗೌಡ ಅವರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ನಾವು ಮುಖಂಡರನ್ನು ಕರೆತರಲು ಬೇರೆ ಪಕ್ಷದ ಮುಖಂಡರ ಮನೆ ಬಳಿ ನಿಂತಿಲ್ಲ. ಕಾಂಗ್ರೆಸ್, ಬಿಜೆಪಿಯವರೇ ಈ ಕೆಲಸ ಮಾಡುತ್ತಿದ್ದಾರೆ ಎಂದರು.ನಮ್ಮ ಪಕ್ಷದ ಕಾರ್ಯಕರ್ತರು ಸರಿ ಇಲ್ಲ ಎಂದು ನಾನು ಎಲ್ಲೂ ಹೇಳಿಲ್ಲ. ಅದನ್ನು ಮಾಧ್ಯಮಗಳು ತಿರುಚಿ, ಅಪಪ್ರಚಾರ ಮಾಡಿವೆ. ನಾನು ಬಂದು ಹೋದ ನಂತರ ಕಾರ್ಯಕರ್ತರು ನಿಷ್ಕ್ರಿಯರಾಗುತ್ತಾರೆ ಎಂದು ಮುಖಂಡರು ಹೇಳಿದ್ದರು. ಅದನ್ನೇ ನಾನು ಹೇಳಿದ್ದೇನೆ. ನಮ್ಮ ಪಕ್ಷದ ಉಳಿದಿರುವುದೇ ಲಕ್ಷಾಂತರ ಕಾರ್ಯಕರ್ತರಿಂದ ಉಳಿದಿದೆ. ಕಾರ್ಯಕರ್ತರಿಗೆ ನಾನು ಅವಹೇಳನ, ಅವಮಾನ ಮಾಡುವ ಕೆಲಸ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಸಾಫ್ಟ್ ಕಾರ್ನರ್ ಅವಶ್ಯಕತೆ ನನಗಿಲ್ಲ: ಬಿಜೆಪಿ, ಕಾಂಗ್ರೆಸ್ ಎರಡರ ಪರವಾಗಿಯೂ ನಾನಿಲ್ಲ; ಎಚ್.ಡಿ.ಕುಮಾರಸ್ವಾಮಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.