ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಆರೋಪಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅನುಮತಿ ನೀಡಿ ಹುಬ್ಬಳ್ಳಿಯ 4ನೇ ಜೆಎಮ್ಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಹಳೇ ಹುಬ್ಬಳ್ಳಿ ಪೊಲೀಸರು ಪ್ರಕರಣದ 124ನೇ ಆರೋಪಿಯಾಗಿಯುವಕನನ್ನು ಬಂಧಿಸಿದ್ದರು. ಆನಂದ್ ನಗರ ನಿವಾಸಿಯಾಗಿರುವ ಈತ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಇಂದು ಪರೀಕ್ಷೆ ಬರೆಯಬೇಕಿತ್ತು. ಪೋಷಕರಿಗೆ ಈ ಬಗ್ಗೆ ಯಾರನ್ನು ಭೇಟಿಯಾಗಬೇಕೆಂಬುದು ತೋಚದ ಕಾರಣ ಆರೋಪಿ ಇಂದಿನ ಪರೀಕ್ಷೆ ಮಿಸ್ ಮಾಡಿಕೊಂಡಿದ್ದಾನೆ.
ಇದೀಗಪೋಷಕರು ವಕೀಲರನ್ನು ಭೇಟಿ ಮಾಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ನ್ಯಾಯಾಲಯ ಅನುಮತಿ ನೀಡಿದ್ದು, ಮುಂದಿನ ಐದು ಪರೀಕ್ಷೆಯನ್ನು ಪೊಲೀಸ್ ಭದ್ರತೆಯಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗಿದೆ.