ಕಲಬುರಗಿ: ಕಾಡು ಪ್ರಾಣಿಗಳನ್ನು ಭೇಟಿಯಾಡಿ ಅವುಗಳ ಚರ್ಮ, ಹಲ್ಲು, ಕೂದಲು, ಚಿಪ್ಪು, ಹಾಗೂ ಮುಳ್ಳುಗಳನ್ನು ವಿವಿಧೆಡೆ ಮಾರಾಟ ಮಾಡುವ ಕೃತ್ಯದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಚಿತ್ತಾಪುರ ವಲಯ ಅರಣ್ಯಾಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿ ವ್ಯಾಪ್ತಿಯ ರಾಂಪುರಹಳ್ಳಿ ಗ್ರಾಮ ನಿವಾಸಿಗಳಾದ ಹಣಮಂತ ಮಲ್ಲಪ್ಪ ಹೆಳವರ, ಭೀಮರಾಯ ಯಲ್ಲಪ್ಪ ಹೆಳವರ, ಮಲ್ಲಪ್ಪ ಲಕ್ಷ್ಮಣ ಹೆಳವರ ಬಂಧಿತ ಆರೋಪಿಗಳಾಗಿದ್ದಾರೆ.
ಇನ್ನೋರ್ವ ಆರೋಪಿ ಕುಂಬಾರಹಳ್ಳಿ ಗ್ರಾಮದ ಸಾಯಬಣ್ಣ ಲಕ್ಷ್ಮಣ ಹೆಳವರ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಜಾಲ ಬೀಸಿದ್ದಾರೆ.
ಕಲಬುರಗಿ ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತಕುಮಾರ ಪಾಟೀಲ, ವಿಭಾಗೀಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹ್ಮದ್ ಮುನೀರ್ ಅಹ್ಮದ್ ಅವರ ಮಾರ್ಗದರ್ಶನದಲ್ಲಿ ತಂಡ ರಚಿಸಿದ ಚಿತ್ತಾಪುರ ತಾಲೂಕು ವಲಯ ಅರಣ್ಯಾಧಿಕಾರಿ ವಿಜಯಕುಮಾರ ಬಡಿಗೇರ, ಉಪ ವಲಯ ಅರಣ್ಯಾಧಿಕಾರಿ ಗಜಾನಂದ, ಮೋಜಣಿದಾರ ಹಾಗೂ ಅರಣ್ಯ ಸಿಬಂದಿಗಳ ಜತೆಗೆ ಪ್ರಾಣಿ ಬೇಟೆಗಾರರ ಮೇಲೆ ದಾಳಿ ನಡೆಸುವ ಮೂಲಕ ಲಕ್ಷಾಂತರ ರೂ. ಮೌಲ್ಯದ ಕಾಡು ಪ್ರಾಣಿಗಳ ಟ್ರೋಫಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಿಂದ ವನ್ಯಪ್ರಾಣಿ ಬೇಟೆಯಾಡಿ ಮಾರಾಟ ಮಾಡಲು ಸಾಗಿಸುತ್ತಿದ್ದ ಟ್ರೋಫಿಗಳಾದ ಚಿಪ್ಪು ಹಂದಿಯ ಚಿಪ್ಪುಗಳು, ಮುಳ್ಳು ಹಂದಿಯ ಮುಳ್ಳುಗಳುಮುಂಗುಸಿಯ ಕೂದಲು, ನೀರುನಾಯಿಯ ಚರ್ಮ ಮತ್ತು ಕಾಡುಹಂದಿಯ ಕೊರೆಗಳು (ದಂತ) ಸೇರಿದಂತೆ ಬೇಟೆಯಾಡಲು ಬಳಸಿದ ಭರ್ಚಿ, ಉರುಳು ಹಾಕಲು ಬಳಸುವ ಕ್ಲಚ್ವೈರ್ ತಂತಿಗಳು, ಹಾರ್ನ್ ಸಮೇತ ಇರುವ ಶಿಕಾರಿ ಬ್ಯಾಟರಿ ಟಾರ್ಚ್, ಚೂರಿ, ಪಂಜಾ, ಮೀನು ಹಿಡಿಯುವ ಬಲೆಗಳು, ಕಬ್ಬಿಣದ ರಾಡುಗಳು, ಮೂರು ಮೊಬೈಲ್ ಗಳು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ. ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡುವ ಅಥವಾ ಮಾರಾಟ ಮಾಡುವ ಅಪರಾಧ ಕೃತ್ಯ ಕಂಡುಬಂದಲ್ಲಿ ಸಾರ್ವಜನಿಕರು ಕಲಬುರಗಿ ಪ್ರಾದೇಶಿಕ ವಿಭಾಗ ಕಚೇರಿಯ ದೂರವಾಣಿ ಸಂಖ್ಯೆ: 08472 256601 ಕ್ಕೆ ಕರೆ ಮಾಡಿ ತಿಳಿಸುವಂತೆ ಅರಣ್ಯಾಧಿಕಾರಿಗಳು ಕೋರಿದ್ದಾರೆ.
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…