News Karnataka Kannada
Monday, April 29 2024
ಕಲಬುರಗಿ

ರಾಜ್ಯ ಸರ್ಕಾರದಿಂದ ಬೇರೆ ಯೋಜನೆಗೆ ದಲಿತರ ಹಣ ಬಳಕೆ: ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್‌ ಸರ್ಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಕಡೆಗೆ ಬಳಸುತ್ತಿದೆ ಎಂದು ಆರೋಪಿಸಿ, ಕಲಬುರಗಿ ನಗರದಲ್ಲಿ ಬಿಜೆಯ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
Photo Credit : News Kannada

ಕಲಬುರಗಿ: ರಾಜ್ಯ ಕಾಂಗ್ರೆಸ್‌ ಸರ್ಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಕಡೆಗೆ ಬಳಸುತ್ತಿದೆ ಎಂದು ಆರೋಪಿಸಿ, ಕಲಬುರಗಿ ನಗರದಲ್ಲಿ ಬಿಜೆಯ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್ ಹಾಗೂ ಸೇಡಂ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ನೂರಾರು ಜನ ಬಿಜೆಪಿ ಕಾರ್ಯಕರ್ತರು, ಪ್ರತಿಭಟನಾ ರ‍್ಯಾಲಿ ನಡೆಸಿದರು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಆರಂಭವಾದ ಪ್ರತಿಭಟನೆಯು ಡಿಸಿ ಕಚೇರಿವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು, ಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ ದಲಿತರ ಪರ ನೀನಿಲ್ಲಾ ಧಿಕ್ಕಾರ ಧಿಕ್ಕಾರ ಸೇರಿದಂತೆ ಎಂಬಿತ್ಯಾದಿ ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಬೇರೆ ಕೆಲಸಕ್ಕೆ ಬಳಸುತ್ತಾ ದಲಿತ ವಿರೋಧಿ ಆಡಳಿತ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೆವಾಡಗಿ, ನಗರ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಪದಾಧಿಕಾರಿಗಳು, ನೂರಾರು ಜನ ಕಾರ್ಯಕರ್ತರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು