News Karnataka Kannada
Monday, April 29 2024
ಕಲಬುರಗಿ

ಪ್ರಚೋದನಕಾರಿ ಭಾಷಣ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸ್ವಾಮೀಜಿ ವಿರುದ್ಧ ಕೇಸ್​

Case filed against Sri Ram Sene state president Swamiji for 'Ek Maar Do Tukada' speech
Photo Credit : News Kannada

ಕಲಬುರಗಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷರೂ ಆಗಿರುವ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲ ಮಠದ ಪೀಠಾಧಿಪತಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಸುಮೋಟೋ (ಸ್ವಯಂ ದೂರು) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಾದಗಿರಿಯ ಶಹಾಪುರ ನಗರದಲ್ಲಿ ಅಕ್ಟೋಬರ್.3 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಲಿಂಗ ಸ್ವಾಮೀಜಿ‌ ಪಾಲ್ಗೊಂಡು ಕೋಮು ಸೌಹಾರ್ದತೆಗೆ ಧಕ್ಕೆ, ಪ್ರಚೋದನೆ ಹಾಗೂ ಅನ್ಯ ಧರ್ಮೀಯರ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಭಾಷಣೆ ಮಾಡಿದ್ದರು ಎಂಬ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮ ಹತ್ತಿರ ತಲ್ವಾರ್ ಇರಬಹುದು. ಆ ತಲ್ವಾರ್‌ನಿಂದ ನಮ್ಮನ್ನು ಎದುರಿಸೋಕೆ ಬಂದರೆ, ನಮ್ಮಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಖಡ್ಗ ಇದೆ. ಛತ್ರಪತಿ ಶಿವಾಜಿ ಮಹಾರಾಜರ ಖಡ್ಗ ಇದೆ. ಏಕ್ ಮಾರ್ ದೋ ತುಕಡಾ. ಹೊಡೆದರೆ ಒಂದು ದೇಹ ಪಾಕಿಸ್ತಾನಕ್ಕೆ ಹೋಗಬೇಕು. ಇನ್ನೊಂದು ದೇಹ ಬಾಂಗ್ಲಾದೇಶಕ್ಕೆ ಹೋಗಬೇಕು. ಹಿಂದೂಗಳನ್ನು ಕೆಣಕಬೇಡಿ. ಹಿಂದೂಗಳನ್ನು ಕೆಣಕಿದರೆ ಕರ್ನಾಟಕ ಎರಡನೇ ಗೋದ್ರಾ ಆಗುತ್ತದೆ ಎಂದು ವಿವಾದಾತ್ಮಕ ಭಾಷಣ ಮಾಡಿದ್ದರು.

ಇದೀಗ ಆಂದೋಲಶ್ರೀ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ 295a, 153 ಸೆಕ್ಷನ್ ಅಡಿಯಲ್ಲಿಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು