News Karnataka Kannada
Monday, April 29 2024
ಕಲಬುರಗಿ

ಬಿಜೆಪಿ ಕದ ತಟ್ಟಿದ್ದರಾ ಕಾಂಗ್ರೆಸ್‌ ಶಾಸಕ?: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ

Congress MLA knocks on BJP's door: JD(S) leader
Photo Credit : News Kannada

ಕಲಬುರಗಿ: ಜೇವರ್ಗಿ ಕಾಂಗ್ರೆಸ್ ಶಾಸಕ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ಸಿಂಗ್ ಈ ಹಿಂದೆ ಬಿಜೆಪಿ ಸೇರಲು ಮುಂದಾಗಿದ್ದರು ಎಂದು ಜೆಡಿಎಸ್ ಮುಖಂಡ ದೊಡ್ಡಪ್ಪಗೌಡ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

2018 ರಲ್ಲಿಯೇ ಶಾಸಕ ಡಾ ಅಜಯ್‌ಸಿಂಗ್ ಬಿಜೆಪಿ ಕದ ತಟ್ಟಿದ್ದರು.ಈ ಬಗ್ಗೆ ಅಂದಿನ ಬಿಜೆಪಿ ಉಸ್ತುವಾರಿ ಮುರುಳಿಧರರಾವ್ ಮತ್ತು ಯಡಿಯೂರಪ್ಪ ನನ್ನ ಜೊತೆ ಮಾತನಾಡಿದ್ದರು ಎಂದು ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ತಿಳಿಸಿದ್ದಾರೆ.

ಮೂಲತಃ ಬಿಜೆಪಿಯಲ್ಲಿದ್ದ ದೊಡ್ಡಪ್ಪಗೌಡ ಪಾಟೀಲ್, ಕಳೆದ ಬಾರಿ ಬಿಜೆಪಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ನಿಂದ ಸ್ಪರ್ದಿಸಿ ಡಾ. ಅಜಯಸಿಂಗ್ ವಿರುದ್ದ ಪರಾಭವಗೊಂಡವರು. ಅವರು ಇದೀಗ ಬಿಜೆಪಿಯಲ್ಲಿದ್ದಾಗಿನ ಘಟನೆಯನ್ನು ಹೊರಹಾಕಿದ್ದಾರೆ.

ಡಾ ಅಜಯ್‌ಸಿಂಗ್ ರನ್ನು ಬಿಜೆಪಿಗೆ ಸೇರಿಸಿಕೊಳ್ಳೊಣವೇ ? ಬೇಡವೇ ? ಎನ್ನುವುದರ ಬಗ್ಗೆ ಯಡಿಯೂರಪ್ಪನವರು ನನ್ಬೊಂದಿಗೆ ಚರ್ಚಿಸಿದ್ದರು ಎಂದು ಹಳೆಯ ದಿನಗಳನ್ನು ಮೆಲಕು ಹಾಕಿದ್ಸಾರೆ. ನಾನು ಅಂದು ಕಲಬುರಗಿ ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷನಾಗಿದ್ದೆ.

ಬಿಜೆಪಿ ಪಕ್ಷಕ್ಕೆ ಅಜಯ್‌ಸಿಂಗ್ ಸೇರ್ಪಡೆಯಿಂದ ಒಳ್ಳೆಯದಾದರೆ ಸೇರಿಸಿಕೊಳ್ಳೊಣ ಎಂದಿದ್ದೆ. ಅಜಯ್‌ಸಿಂಗ್ ಜೇವರ್ಗಿ ಕ್ಷೇತ್ರಕ್ಕೆ, ಸಹೋದರ ವಿಜಯಸಿಂಗ್ ಬಸವಕಲ್ಯಾಣ ಕ್ಷೇತ್ರಕ್ಕೆ, ಭಾವ ಚಂದ್ರಸಿಂಗ್ ಬೀದರ್ ಕ್ಷೇತ್ರಕ್ಕೆ ಟಿಕೆಟ್ ಡಿಮ್ಯಾಂಡ್ ಮಾಡಿದ್ದರು ಎಂದು ದೊಡ್ಡಪ್ಪಗೌಡ ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ನಾಯಕರ ಮುಂದೆ ಶಾಸಕ ಡಾ ಅಜಯ್‌ಸಿಂಗ್ ಟಿಕೆಟ್‌ಗಾಗಿ ಡಿಮ್ಯಾಂಡ್ ಮಾಡಿದ್ದರು. ಅಜಯ್‌ಸಿಂಗ್ ಬಿಜೆಪಿ ಸೇರ್ಪಡೆ ಬಗ್ಗೆ ನನ್ನ ಜೊತೆ ಯಡಿಯೂರಪ್ಪ ಮತ್ತು ಮುರುಳಿಧರರಾವ್ ಚರ್ಚೆ ಸಹ ನಡೆಸಿದ್ದರು. ನಂತರ ಮುಂದಿನ ದಿನಗಳಲ್ಲಿ ಅದುಕಾರ್ಯರೂಪಕ್ಕೆ ಬರಲಿಲ್ಲ. ಆದ್ರೆ ಅಜಯಸಿಂಗ್ ಬಿಜೆಪಿ ಕದ ತಟ್ಟಿದ್ದರು ಎನ್ನುವುದು ಸತ್ಯ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು