ಕಲಬುರಗಿ: ಕಲಬುರಗಿಯ ಜಿಮ್ಸ್ ಆವರಣದಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಸ್ಥಾಪಿಸಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದರು.
ಮಂಗಳವಾರ ಕಲಬುರಗಿ ನಗರದ ಕರ್ನಾಟಕ-ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ)ಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ತುರ್ತಾಗಿ ಸ್ಪಂದಿಸಬೇಕಾದ ರೋಗಿಗಳಿಗೆ ಈ ಘಟಕದಿಂದ ಅಗತ್ಯ ವೈದ್ಯಕೀಯ ನೆರವು ಸಿಗಲಿದೆ. ಇದರಲ್ಲಿ ಸುಟ್ಟ ಗಾಯಗಳ ಘಟಕ ಸಹ ಸೇರಿದೆ. ಮುಂದಿನ 2 ವರ್ಷದಲ್ಲಿ ಈ ಘಟಕ ಜಿಮ್ಸ್ ಆವರಣದಲ್ಲಿಯೇ ಪ್ರತ್ಯೇಕವಾಗಿ ಸ್ಥಾಪನೆಯಾಗಲಿದೆ ಎಂದರು.
ಪ್ರಸಕ್ತ 2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 70 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುವುದು. ಜಯದೇವ ಆಸ್ಪತ್ರೆಯಂತೆ ಈ ಆಸ್ಪತ್ರೆ ಸಹ 371 ಹಾಸಿಗೆ ಬ್ರ್ಯಾಂಡ್ನೊಂದಿಗೆ ಗುರುತಿಸಿಕೊಳ್ಳಲಿದೆ. ಪ್ರಸುತ ಹಳೇ ಜಿಲ್ಲಾ ಆಸ್ಪತ್ರೆ ಕೆಡವಿ ಅಲ್ಲಿ ಈ ಹೊಸ ಕಟ್ಟಡ ನಿರ್ಮಿಸಲಾಗುವುದು. ಈಗಾಗಲೆ ನೀಲಿ ನಕ್ಷೆ ತಯಾರಿದ್ದು, ಡಿ.ಪಿ.ಆರ್. ಸಿದ್ಧಗೊಳ್ಳುತ್ತಿದೆ. ಮುಂದಿನ 2 ವರ್ಷದಲ್ಲಿ ಇದನ್ನು ನಿರ್ಮಿಸಲಾಗುವುದು ಎಂದು ಡಾ. ಶರಣಪ್ರಕಾಶ ಪಾಟೀಲ ಮಾಹಿತಿ ನೀಡಿದರು.
ರಸ್ತೆ ಅಪಘಾತದಂತಹ ಪ್ರಕರಣದಲ್ಲಿ ತುರ್ತಾಗಿ ಚಿಕಿತ್ಸೆ ನೀಡಲು ಕಲಬುರಗಿ ಜಿಮ್ಸ್ ಆವರಣದಲ್ಲಿ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಟ್ರಾಮಾ ಸೆಂಟರ್ ನಿರ್ಮಿಸಲಾಗಿತ್ತಾದರೂ, ಅಗತ್ಯ ವೈದ್ಯಕೀಯ ಉಪಕರಣಗಳು ಇಲ್ಲದ ಕಾರಣ ಸೇವೆ ಆರಂಭಿಸಿರಲಿಲ್ಲ. ಇದೀಗ ನಮ್ಮ ಸರ್ಕಾರ ಬಂದ ಕೂಡಲೆ ಸೆಂಟರ್ ಕಾರ್ಯಾಚರಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಮುಂದಿನ ಒಂದು ತಿಂಗಳಿನಲ್ಲಿ ಟ್ರಾಮಾ ಸೆಂಟರ್ ರೋಗಿಗಳ ಸೇವೆಗೆ ಲಭ್ಯವಾಗಲಿದೆ.
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…
ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…
ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…
ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.