ಕಲಬುರಗಿ: ತಾಲ್ಲೂಕಿನ ಉಪಳಾಂವ ಗ್ರಾಮದ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಯೋಜನಾ ಕಚೇರಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ವಿತರಣೆ ಮಾಡಲಾಯಿತು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ ಮಾಲತಿ ರೇಷ್ಮಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಹಿಂದುಳಿದ ಗ್ರಾಮಗಳ ಅಭಿವೃದ್ಧಿಗೆ ನೆರವು ನೀಡುತ್ತಿರುವುದು ಶ್ಲಾಘನೀಯ’ ಎಂದರು.
ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ ಸುವರ್ಣ ಮಾತನಾಡಿ, ‘ಜಿಲ್ಲೆಯಲ್ಲಿ ಕೆರೆ ನಿರ್ಮಾಣ, ಶುದ್ಧ ಗಂಗಾ ಘಟಕ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಸಮುದಾಯ ಭವನಗಳ ನಿರ್ಮಾಣ, ದೇವಸ್ಥಾನಗಳ ಜೀರ್ಣೋದ್ಧಾರ, ಕೃಷಿ ಪ್ರೇರಕ ಕಾರ್ಯಕ್ರಮ, ವಿಮೆ ಕಾರ್ಯಕ್ರಮ, ಮಹಿಳೆಯರಿಗೆ ಆರ್ಥಿಕ ಕಾನೂನು ನೆರವು ನೀಡುವ ಮೂಲಕ ಸ್ವಾಬಲಂಬನೆ ಜೀವನ ನಡೆಸುವಂತೆ ಪ್ರೇರೇಪಿಸಿದೆ’ ಎಂದರು.
ಕಮಲಾಪುರ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಕಲ್ಲನಗೌಡ್. ಎಸ್, ಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಪಾಟೀಲ, ಶಾಲೆಯ ಶಿಕ್ಷಕರಾದ ಗೌಡಿಶ ಬಿರಾದಾರ ಮತ್ತು ಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…
ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.
ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.
ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.