ಕಲಬುರಗಿ: ಕೆಇಎ ಪರೀಕ್ಷೆ ಅಕ್ರಮಕ್ಕೆ ಸಂಬಂಧಪಟ್ಟಂತೆ ಎಫ್ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬನನ್ನು ಪೊಲೀಸ್ ವಶ ಪಡಿಸಿಕೊಂಡಿದೆ.
ಬಸವರಾಜ್ ಬಂಧಿತ ಆರೋಪಿ. ಈತ ಚಿಕ್ಕಬಳ್ಳಾಪುರದ ಸಮಾಜ ಕಲ್ಯಾಣ ಇಲಾಖೆಯ ವೃತ್ತಿಪರ ಹಾಸ್ಟೆಲ್ ವಾರ್ಡ್ನ ಆದ ಒಂದೇ ತಿಂಗಳಿಗೆ ಸಿಕ್ಕಿಬಿದ್ದಿದ್ದಾನೆ.
ಜನವರಿ 19ರಂದು ಬಸವರಾಜ್ ವಾರ್ಡನ್ ಆಗಿ ಕೆಲಸಕ್ಕೆ ಸೇರಿದ್ದ. ಆದರೆ ತನ್ನ ಕಳ್ಳ ಕೆಲಸದಿಂದಾಗಿ ಸಿಐಡಿ ಬಲೆಗೆ ಬಿದ್ದಿದ್ದಾನೆ.ಇಂಗ್ಲಿಷ್ನಲ್ಲಿ ಎಂ.ಎ, ಬಿ.ಇಡಿ ಪದವೀಧರನಾಗಿರುವ ಬಸವರಾಜ್ ಯಾಳವಾರ್ ಮೇಲೆ ಈ ಹಿಂದೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲಾಗುತ್ತಿದ್ದಂತೆ ಬಸವರಾಜ್ ನಾಪತ್ತೆಯಾಗಿದ್ದ. ಹೀಗಾಗಿ ಸಿಐಡಿ ಪೊಲೀಸರು ಬಸವರಾಜ್ ಬಂಧನಕ್ಕೆ ಬಸವರಾಜ್ ಓದಿದ ಪ್ರದೇಶಗಳಲ್ಲಿ, ಕಲಬುರಗಿ ವಿವಿ, ಸಿಂದಗಿ ಹಾಗೂ ಬೆಂಗಳೂರು ಕಡೆ ಹುಡುಕಾಟವನ್ನು ನಡೆಸಿದ್ದರು. ಕೊನೆಗೆ ಚಿಕ್ಕಬಳ್ಳಾಪುರದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ವಾರ್ಡನ್ ಆಗಿದ್ದ ಎಂದು ಸುಳಿವು ಸಿಕ್ಕಿ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಹಾಗಾದ್ರೇ ಈತ ಮಾಡಿದ ಆ ಗನಾಂದಾರಿ ಕೆಲಸ ಯಾವುದು ಅಂತಿರಾ ಇಲ್ಲಿದೆ ಮಾಹಿತಿ, ಕೆಇಎ ಪರೀಕ್ಷಾ ಅಕ್ರಮದ ತನಿಖೆಯನ್ನು ನಡೆಸುತ್ತಿದ್ದಂತೆ ಅಫಜಲಪುರ ತಾಲೂಕಿನ ಸರ್ಕಾರಿ ಪಿಯು ಕಾಲೇಜಿನ ಇಬ್ಬರು ಪ್ರಿನ್ಸಿಪಾಲ್ಗೆ 40 ಲಕ್ಷ ರೂಪಾಯಿ ಹಣ ಸಂದಾಯವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಆಳವಾಗಿ ತನಿಖೆ ನಡೆಸಲಾಗಿದ್ದು ತನಿಖೆ ವೇಳೆ ಒಂದೊಂದಾಗಿ ವಿಷಯ ಬಿಚ್ಚಿಟ್ಟಿದ್ದಾನೆ. ಅದರಲ್ಲಿ ತಾನು ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಚಂದ್ರಕಾಂತ್, ಕರ್ಜಗಿ ಸರ್ಕಾರಿ ಕಾಲೇಜಿನ ಪ್ರಾಚಾರ್ಯ ಬಸವಣ್ಣ ಪೂಜಾರಿ ಅವರಿಂದ ಸಹಾಯ ಪಡೆದುಕೊಂಡಿರುವ ಬಗ್ಗೆ ಬಸವರಾಜ್ ಹೇಳಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ