ಕಲಬುರಗಿ: ಜಿಲ್ಲೆಯ ಸೇಡಂ ಪಟ್ಟಣದ ಮೂಲದ ಇಬ್ಬರು ಯುವಕರು ಸೇರಿಕೊಂಡು ನಕಲಿ ಪಿಸ್ತೂಲ್ ಹಿಡಿದು ರೀಲ್ಸ್ ಜೊತೆಗೆ ಫೋಟೋ ಶೂಟ್ ಮಾಡಿ ಫೆಸ್ಬುಕ್ ಹಾಗೂ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಪಿಸ್ತೂಲ್ ಹಿಡಿದು ರೀಲ್ಸ್ ಮಾಡಿದ ವಿಡಿಯೋಗಳನ್ನ ನೋಡಿದ ಸಾರ್ವಜನಿಕರು, ಯುವಕರ ಹುಚ್ಚಾಟ ಕಂಡು ಅಕ್ಷರಶಃ ಬೆಚ್ಚಿಬಿದ್ದಿದ್ದರು. ಇದನ್ನ ನೋಡಿದ ಪೊಲೀಸರು, ರೀಲ್ಸ್ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಇಬ್ಬರು ಯುವಕರನ್ನು ಮಹೇಶ್ ಮತ್ತು ಬಸವರಾಜ್ ಎಂದು ಗುರುತಿಸಲಾಗಿದೆ.
ಸೇಡಂ ಪಟ್ಟಣದ ಇಂದಿರಾನಗರ ಬಡಾವಣೆಯ ನಿವಾಸಿಗಳಾದ ಮಹೇಶ್ ಮತ್ತು ಬಸವರಾಜ್ ಕಾಲೇಜು ಮುಗಿಸಿ, ಕೆಲಸ ಹುಡುಕದೇ ಬಿಡಾಡಿ ಥರ ಓಡಾಡಿಕೊಂಡು ಶೋಕಿ ಜೀವನ ಸಾಗಿಸುತ್ತಿದ್ದರು. ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸೆನ್ಸೆಷನ್ ಕ್ರಿಯೆಟ್ ಮಾಡಲು ಹೋಗಿದ್ದ ಈ ಯುವಕರನ್ನ ಠಾಣೆಗೆ ಕರೆಯಿಸಿ ಪೊಲೀಸರು ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಎಫ್ಐಆರ್ ದಾಖಲಿಸಿ ಮುಂದೆ ಈ ರೀತಿಯಲ್ಲಿ ಹುಚ್ಚುಚ್ಚು ರೀಲ್ಸ್ ಮಾಡಿದ್ರೆ ಜೈಲೂಟ ಗ್ಯಾರಂಟಿ ಎಂದು ಖಡಕ್ ಆಗಿ ವಾರ್ನ್ ಮಾಡಿ ಕಳುಹಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…
ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…
ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.