News Karnataka Kannada
Sunday, April 28 2024
ಕಲಬುರಗಿ

ಲೋಕಾಯುಕ್ತ ಬಲೆಗೆ ಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಕಚೇರಿಯ ಇಬ್ಬರು ಆಹಾರ ಸುರಕ್ಷತಾ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ವೇಳೆ ಬುಧವಾರ ತಡರಾತ್ರಿ ಲೋಕಾಯುಕ್ತರ ಬಲೆಗೆ‌ ಬಿದ್ದಿದ್ದಾರೆ.
Photo Credit : News Kannada

ಕಲಬುರಗಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಕಚೇರಿಯ ಇಬ್ಬರು ಆಹಾರ ಸುರಕ್ಷತಾ ಅಧಿಕಾರಿಗಳು ತಡರಾತ್ರಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ‌ ಬಿದ್ದಿದ್ದಾರೆ.

ಮಹಮದ್ ಮುಕ್ತಿದೀರ್ ಎಂಬುವರಿಂದ ನೀರು ಶುದ್ಧೀಕರಣ ಘಟಕದ ನವೀಕರಣ ಮಾಡಿಕೊಡಲು ₹40 ಸಾವಿರ ಲಂಚ ಪಡೆಯುವಾಗ ಆಹಾರ ಸುರಕ್ಷತಾ ಅಧಿಕಾರಿ‌ಗಳಾದ ಪರಮೇಶ್ವರ ಮಠಪತಿ ಹಾಗೂ ಕಿರಣ್ ಚಲವಾದಿ ಸಿಕ್ಕಿ ಬಿದ್ದಿದ್ದಾರೆ‌ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಜಯನಗರ ಸಮೀಪ ತಡರಾತ್ರಿ ₹40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಇನ್‌ಸ್ಪೆಕ್ಟರ್ ದೃವತಾರೆ ಅವರ ತಂಡ ದಾಳಿ ಮಾಡಿ, ಆರೋಪಿಗಳನ್ನು ವಶಕ್ಕೆ ಪಡೆದಿದೆ. ಆರೋಪಿಗಳ‌ ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು