ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳಾದರೂ ಕೇವಲ 100 ಮೀಟರ್ ರಸ್ತೆ ಮಾಡಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವ್ಯಂಗ್ಯವಾಡಿದ್ದಾರೆ.
ಸೋಮವಾರ ಕಲಬುರಗಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಗಳಿಗೆ ಖಜಾನೆಯಿಂದ ಒಂದು ರೂಪಾಯಿ ಹಣ ನೀಡಿಲ್ಲ. ಬದಲಾಗಿ ಎಸ್ಸಿ ಎಸ್ಟಿ ಜನರಿಗೆ ಮೀಸಲಾಗಿದ್ದ ಹಣವನ್ನು ಶಕ್ತಿ ಯೋಜನೆಗೆ ಬಳಸಲಾಗಿದೆ. ರಾಜ್ಯದಲ್ಲಿ ಶಾಸಕರು ನೂರು ದಿನದಲ್ಲಿ ನೂರು ಮೀಟರ್ ರಸ್ತೆ ಮಾಡಲು ಆಗಿಲ್ಲ. ವಿಧಾನಸೌಧಕ್ಕೆ ಮಂತ್ರಿಗಳು ಬರ್ತಿಲ್ಲ, ಸರ್ಕಾರದ ಒಂದೇ ಒಂದು ಸಾಧನೆ ಅಂದ್ರೆ ಅದು ವರ್ಗಾವಣೆ ದಂಧೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ತೀವ್ರ ಬರವಿದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರ ಬರೋದಕ್ಕೂ ಕೇಂದ್ರ ಸರ್ಕಾರ ಕಾರಣ ಅನ್ನೋ ಮನಸ್ಥಿತಿಯಲ್ಲಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ.