ಕಲಬುರಗಿ: ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಮೈಂದರ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ವಿಮಾನದಲ್ಲಿ ದೆಹಲಿಗೆ ಪ್ರವಾಸಕ್ಕೆಂದು ಕರೆದುಕೊಂಡು ಹೋಗಿದ್ದಾರೆ.
ಮುಖ್ಯೋಪಾಧ್ಯಾಯ ಮಹಾಂತೇಶ್ವರ ಕಟ್ಟಿಮನಿ ಅವರು ವಿದ್ಯಾರ್ಥಿಗಳನ್ನು ಕರೆದುಕೊಂಡು ಕಲಬುರಗಿಯಿಂದ ಮುಂಬೈಗೆ ರೈಲಿನಲ್ಲಿ ಹೋಗಿದ್ದು, ಮತ್ತೆ ಮುಂಬೈನಿಂದ ದೆಹಲಿಗೆ ವಿಮಾನದಲ್ಲಿ ಹೋಗಿದ್ದಾರೆ.
ಮುಖ್ಯೋಪಾಧ್ಯಾಯ ಮಹಾಂತೇಶ್ವರ ಕಟ್ಟಿಮನಿ ಮಕ್ಕಳಿಂದ ಅಲ್ಪ ಹಣ ಸಂಗ್ರಹಿಸಿ, ಉಳಿದ ಹಣವನ್ನು ತಮ್ಮ ಕೈಯಿಂದ ಹಾಕಿದ್ದಾರೆ. ದೆಹಲಿಯಲ್ಲಿ ಸಂಸತ್ ಭವನ, ಕೆಂಪುಕೋಟೆ, ರಾಷ್ಟ್ರಪತಿ ಭವನ, ಇಂಡಿಯಾ ಗೇಟ್ ನೋಡಿದ್ದಾರೆ. ವಿಮಾನ ಪ್ರಯಾಣದಿಂದ ಶಾಲಾ ಮಕ್ಕಳಿಗೆ ಸಂತಸವಾಗಿದೆ.