ಕಲಬುರಗಿ: ಆಳಂದ ಪಟ್ಟಣದಲ್ಲಿರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದ ಒಳಗಡೆ ಇರುವ ರಾಘವ ಚೈತನ್ಯ ಶಿವಲಿಂಗಕ್ಕೆ ಹಿಂದೂಗಳು ಪೂಜೆ ಸಲ್ಲಿಸಿದ್ದಾರೆ.
ಹೈಕೋರ್ಟ್ ಪೀಠದ ಆದೇಶದಂತೆ ಶ್ರೀ ಸಿದ್ದಲಿಂಗ ಸ್ವಾಮೀಜಿ , ಕಡಗಂಚಿ ಶಿವಯೋಗಿಗಳು , ಬಿಜೆಪಿ ಶಾಸಕ ಅವಿನಾಶ್ ಜಾಧವ್, ಹರ್ಷಾನಂದ ಗುತ್ತೆದಾರ್, ಚಂದು ಪಾಟೀಲ್, ಶಿವರಾಜ್ ಪಾಟೀಲ್ ರದ್ದೆವಾಡಗಿ ಸೇರಿದಂತೆ 15 ಜನ ಪೂಜೆಗೆ ತೆರಳಿದ್ದರು.
ಸುಮಾರು ಒಂದು ಗಂಟೆಗಳ ಕಾಲ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಹಿಂದೂ ಮುಖಂಡರು ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಶಾಂತಿಯುತವಾಗಿ ರಾಘವಚೈತನ್ಯ ಶಿವಲಿಂಗ ಮಹಾಪೂಜೆ ಮುಗಿದಿದೆ.
ಶಿವಲಿಂಗಕ್ಕೆ ಪೂಜೆ ಸಲ್ಲಿಸಿ ಬಂದ ನಂತರ ಮಾತನಾಡಿದ ಆಂದೋಲಾ ಸಿದ್ದಲಿಂಗ ಸ್ವಾಮಿಜಿ, ‘ ನ್ಯಾಯಾಲಯದ ಅನುಮತಿ ಪಡೆದುಕೊಂಡು ಯಶಸ್ವಿಯಾಗಿ ಪೂಜೆ ಸಲ್ಲಿಸಿದ್ದೇವೆ. ಗಂಗಾಪೂಜೆ, ವಿಜ್ಞೇಶ್ವರ ಪೂಜೆ ಹಾಗೂ ರುದ್ರಪೂಜೆ ನೆರವೇರಿದ್ದೇವೆ. ಆದರೆ, ರಾಘವ ಚೈತನ್ಯ ಶಿವಲಿಂಗ ಆಕ್ರಮಣದ ಯತ್ನಗಳು ನಡೆಯುತ್ತಿವೆ.
ಶಿವಲಿಂಗ ಇರುವ ಸ್ಥಳವನ್ನು ಗೋರಿಯಾಗಿ ಪರಿವರ್ತಿಸಲು ಚಾದರ್ ಹಾಕಿ ಆಕ್ರಮಣಕ್ಕೆ ಜಿಹಾದಿಗಳು ಯತ್ನಿಸುತ್ತಿದ್ದಾರೆ ಎಂದರು.