News Karnataka Kannada
Thursday, May 02 2024
ಕಲಬುರಗಿ

ಕಲಬುರಗಿ: ಕೇಂದ್ರ ಸಚಿವರ ಸಮ್ಮುಖದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಅಭ್ಯರ್ಥಿ

BJP candidate violates model code of conduct in presence of Union minister
Photo Credit : News Kannada

ಕಲಬುರಗಿ: ಕೇಂದ್ರ ಸಚಿವರ ಸಮ್ಮುಖದಲ್ಲೇ ಬಿಜೆಪಿ ಅಭ್ಯರ್ಥಿಯು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ನಡೆದಿದೆ.

ಚುನಾವಣಾ ಪ್ರಚಾರದ ವೇಳೆ, ಚಿಕ್ಕಮಗುವಿನ ಮೂಲಕ ಬಿಜೆಪಿ ಪರವಾಗಿ ಮತ ಪ್ರಚಾರ ಮಾಡಲಾಗಿದೆ. ಆದರೆ, ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ ಎಂಬ ನಿಯಮವಿದೆ.

ಜೇವರ್ಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಪಾಟೀಲ್ ರದ್ದೆವಾಡಗಿ ಅವರು ಮಕ್ಕಳನ್ನು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪವನ್ನು ಎದುರಿಸುತ್ತಿದ್ದಾರೆ. ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಬಿಜೆಪಿ ಪ್ರಚಾರಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರೂ ಭಾಗಿಯಾಗಿದ್ದರು.

ಗಂವ್ಹಾರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಪಾಟೀಲ್ ಪರವಾಗಿ ಚಿಕ್ಕ ಮಗುವಿನ ಮೂಲಕ ಮತ ಪ್ರಚಾರ ಮಾಡಲಾಗಿದೆ. ಆ ಮೂಲಕ ಬಿಜೆಪಿ ಅಭ್ಯರ್ಥಿ ಸ್ಪಷ್ಟವಾಗಿ ಎಂದು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವೇದಿಕೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರೂ ಹಾಜರಿದ್ದರು. ಈ ವೇಳೆ ಭಾಷಣ ಮಾಡುವ ಚಿಕ್ಕ ಮಗು, ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡುತ್ತದೆ. ಆಗ ವೇದಿಕೆಯಲ್ಲಿದ್ದ ಕೇಂದ್ರ ಸಚಿವರೂ ಸೇರಿ ಎಲ್ಲರೂ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಾರೆ. ಮಗುವನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ನಿಯಮಗಳ ಪ್ರಕಾರ ಪ್ರಚಾರಕ್ಕಾಗಿ ಚಿಕ್ಕಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ. ಒಂದೊಮ್ಮೆ ಬಳಸಿಕೊಂಡರೆ ಕಾನೂನು ಪ್ರಕಾರ ಅಪರಾಧ ಹಾಗೂ ನೀತಿ ಸಂಹಿತೆ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಈ ಘಟನೆಯ ಬಗ್ಗೆ ಚುನಾವಣಾ ಆಯೋವು ದೂರು ದಾಖಲಿಸಿಕೊಂಡ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು