Categories: ಕಲಬುರಗಿ

ಕಲಬುರಗಿ: ವಸತಿ ಶಾಲೆ, ಅಂಗನವಾಡಿ ಹುಳುಕು ಬಹಿರಂಗ..!

ಕಲಬುರಗಿ: ಇಲ್ಲಿರೋದು 250 ಮಕ್ಕಳಾದರೂ ಕನಿಷ್ಠ ಮೂಲ ಸವಲತ್ತಿಗೂ ಬರ. ಮಕ್ಕಳಿಗೆ ಬಳಕೆಗೆ ನೀರಿಲ್ಲ, ಹೀಗಾಗಿ ಇಲ್ಲಿನ ಬಾಲಕ, ಬಾಲಕಿಯರು ಬಹಿರ್ದೆಸೆಗೆ ನಿತ್ಯ ತಂಬಿಗೆ ಹಿಡಿದುಕೊಂಡೇ ಹೊರಗಡೆ ಹೋಗಬೇಕಾದ ದುರ್ವ್ಯವಸ್ಥೆ ಇದೆ. ಇನ್ನು ಕುಡಿವ ನೀರಿಗೂ ತತ್ವಾರ, ಮಕ್ಕಳು ಮಲಗೋ ಕೋಣೆಗಳ ಕಸ ಗುಡಿಸೋರು ಗತಿ ಇಲ್ಲ, ಶೌಚಗೃಹಗಳಿದ್ದರೂ ನೀರಿನ ಅಭಾವದಿಂದ ಯಾವುದೂ ಸ್ವಚ್ಛವಿಲ್ಲ, ಕೆಲವು ಶೌಚಾಲಯಗಳಿಗೆ ಬಾಗಿಲೇ ಇಲ್ಲ.

ಇವೆಲ್ಲ ಮೇಲಿನ ಅಪಸವ್ಯಗಳು ಜೇವರ್ಗಿ ತಾಲೂಕಿನ ಕೋಳಕೂರ್‌ ಇಂದಿರಾ ಗಾಂಧಿ ವಸತಿ ಶಾಲೆ, ವಸತಿ ನಿಲಯವನ್ನು ತಿಕ್ಕಿ ಮುಕ್ಕುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾರೊಬ್ಬರೂ ಕೇಳೋರಿಲ್ಲ.

ಈ ಶಾಲೆಗೆ ಕಲಬುರಗಿ ಲೋಕಾಯುಕ್ತ ತಂಡದ ಡಿವೈಎಸ್‌ಪಿ ಅಧಿಕಾರಿ ಗೀತಾ ಬೇನಾಳ ಭೇಟಿ ನೀಡಿದಾಗ ಕೋಳಕೂರು ವಸತಿ ಶಾಲೆ, ವಸತಿ ನಿಲಯದ ಹುಳುಕು, ಕೊಳಕುಗಳೆಲ್ಲವೂ ಬಯಲಿಗೆ ಬಂದವು. ಸಮಾಜ ಕಲ್ಯಣ ಇಲಾಖೆಯ ಜಂಟಿ ನಿರ್ದೇಶಕರ ಹಂತದಲ್ಲಿ ಉಸ್ತುವಾರಿ ಇರುವ ಈ ಶಾಲೆಯಲ್ಲಿನ ಅವ್ಯವಸ್ಥೆ ಕಂಡು ಲೋಕಾ ಅಧಿಕಾರಿಗಳೇ ದಂಗಾದರು.ವಸತಿ ನಿಲಯದಲ್ಲಿ ನೀರಿನ ಅಭಾವ ಕಂಡುಬಂದಿರುತ್ತದೆ. ಪರಿಶೀಲನೆ ಸಮಯದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಮಲಗುವ ಕೋಣೆಗಳಲ್ಲಿ ಕಸ ಗುಡಿಸದೇ ಇರುವುದು, ಬೆಡ್‍ಗಳು ಎಲ್ಲೆಂದರಲ್ಲಿ ಬಿದ್ದಿರುವುದು ಕಂಡು ಬಂದಿರುತ್ತದೆ. ವಸತಿ ನಿಲಯದ ಶೌಚಾಲಯಗಳನ್ನು ಸ್ವಚ್ಛಗೊಳಿಸದೇ ಇರುವುದರಿಂದ ಬಳಸಲು ಯೋಗ್ಯವಾಗಿರುವುದಿಲ್ಲ.

ವಿದ್ಯಾರ್ಥಿಗಳು/ವಿದ್ಯಾರ್ಥಿನಿಯರು ಶೌಚಕ್ಕೆ ಹೊರಗಡೇ ಹೋಗುತ್ತಿರುವುದು ಕಂಡು ಬಂದಿರುತ್ತದೆ. ಕೆಲವು ಶೌಚಾಲಯಗಳಿಗೆ ಬಾಗಿಲುಗಳು ಇರುವುದಿಲ್ಲ. ಸ್ಟಾಕ್ ರೆಜಿಸ್ಟರ್ ಪರಿಶೀಲಿಸಲಾಗಿ ಅದರ ಅನುಗುಣವಾಗಿ ದಿನಸಿಗಳು ಹಾಗೂ ಇತರೇ ಸಾಮಾನುಗಳು ಇಲ್ಲದೇ ಇರುವುದು ಕಂಡು ಬಂದಿರುತ್ತದೆ ಎಂದು ಈ ಶಾಲೆಗೆ ಭೇಟಿ ನೀಡಿರುವ ಕಲಬುರಗಿ ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೇನಾಳ್‌ ಹೇಳಿದ್ದಾರೆ.

ಕೋಳಕೂರ್‌ ಗ್ರಾಮದ ಅಂಗನವಾಡಿ-1 ಹಾಗೂ ಅಂಗನವಾಡಿ-4ಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿ, ಹಾಜರಾತಿ ಪುಸ್ತಕದಲ್ಲಿ ಅನುಕ್ರಮವಾಗಿ ಸುಮಾರು 30 & 25 ಮಕ್ಕಳ ಹಾಜಾರಾತಿ ತೋರಿಸಿದ್ದು, ಯಾವುದೇ ವಿದ್ಯಾರ್ಥಿಗಳು ಅಂಗನವಾಡಿ ಕೇಂದ್ರದಲ್ಲಿ ಕಂಡು ಬರಲೇ ಇಲ್ಲವೆಂದು ಡಿವೈಎಸ್ಪಿ ಗೀತಾ ಬೇನಾಳ ಅವರು ಜಿಲ್ಲಾ ಅಧೀಕ್ಷಕರಿಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದ್ದಾರೆ.

ಎರಡೂ ಅಂಗನವಾಡಿಗಳು ಆಸುಪಾಸಿನಲ್ಲಿದ್ದು ಎರಡೂ ಅಂಗನವಾಡಿ ಮಕ್ಕಳಿಗೆ ಒಂದು ಚಿಕ್ಕ ಪಾತ್ರೆಯಲ್ಲಿ ಅಡುಗೆ ಮಾಡಿ ಉಣಬಡಿಸಿದ್ದಷ್ಟೇ ಸರಿ, ಆದರೆ ಅಂಗನವಾಡಿಯಲ್ಲಿ ಅಡುಗೇ ಮಾಡಿದ ಯಾವುದೇ ಕುರುಹು ಕಂಡು ಬಂದಿರುವುದಿಲ್ಲ.

Ashika S

Recent Posts

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

4 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

17 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

35 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

46 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

1 hour ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

1 hour ago