ಕಲಬುರಗಿ: ಅಲ್ಪಸಂಖ್ಯಾತರ ಪಟ್ಟಿಯಿಂದ ಮುಸ್ಲಿಮರನ್ನ ಕೈಬಿಡುವ ವಿಚಾರವಾಗಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಅಂತಹ ಯಾವುದೇ ವಿಚಾರ ಕೇಂದ್ರ , ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.
ಅವರು ನಗರದಲ್ಲಿ ಮಾತನಾಡಿ, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಸಿದ್ದರಾಮಯ್ಯ ಮಾತಾಡುತ್ತಾರೆ. ಮೀಸಲಾತಿ ಹೆಚ್ಚಿಸಿದ್ದು, ಸಂವಿಧಾನಬದ್ಧವಾಗಿದೆಯಾ ಎಂದು ಕೇಳುತ್ತಾರೆ? ಸರ್ವಪಕ್ಷ ಸಭೆಯಲ್ಲೇ ಸಿದ್ದರಾಮಯ್ಯೀ ಪ್ರಶ್ನೆ ಕೇಳಬೇಕಿತ್ತು. ಈಗ ಹೊರಗಡೆ ಬಂದು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ.
ಈಗ ಕುರುಬರಿಗೆ ಎಸ್ ಟಿ ಮೀಸಲಾತಿ ಕೊಡಬೇಕು ಅಂತ ಹೇಳಿದ್ದಾರೆ. ಹಿಂದೆ ನಿಮ್ಮ ಬಾಯಿಗೆ ಏನಾಗಿತ್ತು ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ.