News Karnataka Kannada
Monday, April 29 2024
ಕಲಬುರಗಿ

ಹುಮನಾಬಾದ: ಮಾಣಿಕನಗರ ಪಂಚಾಯತ್‌ಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ

Kal
Photo Credit : News Kannada

ಹುಮನಾಬಾದ: ತಾಲೂಕಿನ ಮಾಣಿಕನಗರ ಗ್ರಾಮ ಪಂಚಾಯತ್ ವ್ಯಾಪ್ತಿಯ 23 ಸರ್ವೇ ಸಂಖ್ಯೆ ಭೂಮಿಯನ್ನು ಪುರಸಭೆಗೆ ಹತ್ತಾಂತರಿಸಿರುವುದನ್ನು ವಿರೋಧಿಸಿ ಪಂಚಾಯತ್‌ನ ಎಲ್ಲಾ ಸದಸ್ಯರು ಒಂದಾಗಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ಮಾಣಿಕನಗರ ಪಂಚಾಯತ್ ವ್ಯಾಪ್ತಿಯಲ್ಲಿನ ಪ್ರಮುಖ ಸರ್ವೆ ಸಂಖ್ಯೆಗಳು ಪಂಚಾಯತ್‌ನ ಮೂಲ ಆದಾಯವಾಗಿವೆ. ಪಂಚಾಯತ್ ನಡೆಸಲು ತೆರಿಗೆ ಬರುವ ಸರ್ವೇ ಸಂಖ್ಯೆಗಳ ಯಾವ ಕಾರಣಕ್ಕೆ ಉದ್ದೇಶ ಪೂರ್ವಕವಾಗಿ ಹುಮನಾಬಾದ ಪುರಸಭೆಗೆ ನೀಡಲಾಗುತ್ತಿದೆ. ಈ ಕುರಿತು ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರಿಗೆ ಯಾವುದೇ ಮಾಹಿತಿ ಇಲ್ಲದೆ ಅಕ್ರಮವಾಗಿ ವರ್ಗವಣೆ ಮಾಡಲಾಗಿದೆ. ಇದರಲ್ಲಿ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ ಎಂದು ದೂರಿದರು.

ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ, ಸದಸ್ಯರ ಸಮಸ್ಯೆ ಆಲಿಸಿ, ಈ ಕುರಿತು ಸಮಗ್ರವಾಗಿ ಮಾಹಿತಿ ಪಡೆದು ಮುಂದಿನ ಎರಡು ದಿನಗಳಲ್ಲಿ ಈ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸದಸ್ಯರು ಮಾತನಾಡಿ, ಮಾತಿನಲ್ಲಿ ಹೇಳುವ ಬದಲಿಗೆ ಲಿಖಿತ ಆಧಾರ ನೀಡಿ. ಪಂಚಾಯತ್ ಅಧಿಕಾರಿಗೆ ಯಾರು ಒತ್ತಡ ಹಾಕುತ್ತಿದ್ದಾರೆ. ಯಾವ ಕಾರಣಕ್ಕೆ ಎಲ್ಲರನ್ನು ಮುಚ್ಚಿಟ್ಟು ಈ ಕೆಲಸ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದರು.

ಯಾವುದೇ ಕಾರಣಕ್ಕೂ ಪಂಚಾಯತ್ ವ್ಯಾಪ್ತಿಯ ಒಂದು ಗುಂಟೆ ಭೂಮಿ ಕೂಡ ಪುರಸಭೆಗೆ ಹಸ್ತಾಂತರ ಆಗಬಾರದು. ಒಂದು ವೇಳೆ ವರ್ಗಾವಣೆ ಪ್ರಕ್ರಿಯೆ ಏನಾದರೂ ಆದರೆ ಸರ್ವ ಸದಸ್ಯರು ರಾಜೀನಾಮೆ ನೀಡುತ್ತೇವೆ ಎಂದು ಒಂದೇ ಧ್ವನಿಯಲ್ಲಿ ಸರ್ವ ಸದಸ್ಯರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು