News Karnataka Kannada
Wednesday, May 01 2024
ಕಲಬುರಗಿ

ಬಿಜೆಪಿ ವಿರುದ್ಧ ಕೆಂಡಕಾರಿದ ಸಚಿವ ಪ್ರಿಯಾಂಕ್ ಖರ್ಗೆ

ಪಿಎಸ್‌ಐ, ಮತ್ತು ಕೆಎಐ ಪರೀಕ್ಷೆಯಲ್ಲಿ ಆಕ್ರಮ ನಡೆಸಿರುವ ಆರೋಪಿ ಆರ್.ಡಿ ಪಾಟೀಲ್ ಮನೆಗೆ ಕಲಬುರಗಿ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಸಂಸದ ಡಾ. ಉಮೇಶ್ ಜಾಧವ್ ಅವರು ಭೆಟಿ ನೀಡಿ ಮತಯಾಚಿಸಿ ಬೆಂಬಲ ಕೇಳಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Photo Credit : NewsKarnataka

ಕಲಬುರಗಿ: ಪಿಎಸ್‌ಐ, ಮತ್ತು ಕೆಎಐ ಪರೀಕ್ಷೆಯಲ್ಲಿ ಆಕ್ರಮ ನಡೆಸಿರುವ ಆರೋಪಿ ಆರ್.ಡಿ ಪಾಟೀಲ್ ಮನೆಗೆ ಕಲಬುರಗಿ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಸಂಸದ ಡಾ. ಉಮೇಶ್ ಜಾಧವ್ ಅವರು ಭೆಟಿ ನೀಡಿ ಮತಯಾಚಿಸಿ ಬೆಂಬಲ ಕೇಳಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗಳಲ್ಲಿ ಆಕ್ರಮ ತಡೆಯು ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿವೆ. ಆದರೆ ಬಿಜೆಪಿ ಪಕ್ಷದ ಸಂಸದರು ಪರೀಕ್ಷೆಗಳಲ್ಲಿ ಆಕ್ರಮ ನಡೆಸುವವ ಮನೆಗೆ ಹೋಗಿ ಬೆಂಬಲ ಕೇಳುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಿಂದ ಭ್ರಷ್ಟಾಚಾರವನ್ನು ತಡೆಯುತ್ತೇವೆ ಎಂದು ಹೇಳುತ್ತಾರೆ . ಆದರೆ ಮತ್ತೊಂದು ಕಡೆ ಭ್ರಷ್ಟಾಚಾರಿಗಳನ್ನು ಬಿಜೆಪಿ ಪಕ್ಷದಲ್ಲಿ ಸೇರಿಸಿಕೊಳ್ಳುತ್ತಿದೆ ಎಂದು ಮೋದಿ ವಿರುದ್ಧ ವಾಗ್ದಾಲಿ ನಡೆಸಿದರು.

ಚುನಾವಣೆಯಲ್ಲಿ ಗೆಲ್ಲವುದಕ್ಕಾಗಿ ಸಂಸದ ಡಾ. ಉಮೇಶ್ ಜಾಧವ್ ಅವರು ಪಿಎಸ್‌ಐ, ಮತ್ತು ಕೆಎಐ ಪರೀಕ್ಷೆಯಲ್ಲಿ ಆಕ್ರಮ ನಡೆಸಿರುವ ಆರೋಪಿಗಳೊಂದಿಗೆ ಊಟೋಪಾಚಾರ ಮಾಡಿ ಬೆಂಬಲ ಕೇಳಿವುದು ಕೇಳಮಟ್ಟದ ರಾಜಕೀಯವಾಗಿದೆ. ಅವರ ಭ್ರಷ್ಟಾಚಾರದಲ್ಲಿ ಅವರು ಎಷ್ಟು ಕಮಿಷನ್ ಪಡೆದಿದ್ದಾರೆ ಎಂದು ಮತದಾರರಿಗೆ ತಿಳಿಸಬೇಕೆಂದು ಆಗ್ರಹಿಸಿದರು.

ಪಿಎಸ್‌ಐ ಹರಣದಲ್ಲಿ 100ಕ್ಕೂ ಹೆಚ್ಚು ಜನರ ಬಂಧನವಾಗಿದೆ. ರಾಜ್ಯದಲ್ಲಿ 54 ಅಭ್ಯರ್ಥಿಗಳನ್ನು ಅಕ್ರಮದ ಪ್ರಕರಣದಲ್ಲಿ ಬಂಧಸಲಾಗಿದೆ. ಸಂಸದರ ಕ್ಷೇತ್ರದಲ್ಲಿ 24 ಅಭ್ಯರ್ಥಿಗಳನ್ನು ಬಂಧಿಸಿಲಾಗಿದ್ದು, ತಾಯಿ ತಂಗಿ ಹಾಗೂ ಅಕ್ಕ ಅವರ ಒಡವೆ ಅಡವಿಟ್ಟು ಪರೀಕ್ಷ ಬರೆದಿರುವಂತಹ ಲಕ್ಷಾಂತರ ಯುವಜನರ ಭವಿಷ್ಯದ ಜೊತೆ ಚೆಲ್ಲಾಟ ಆಡಿ ಜೈಲು ಪಾಲಾಗಿರುವ ದಿವ್ಯ ಹಾಗರಗಿ ಮತ್ತು ಆರ್.ಡಿ ಪಾಟೀಲ್ ಜೊತೆ ಬಿಜೆಪಿ ಸಂಸದರು ಮತ್ತು ಅಭ್ಯರ್ಥಿ ರಾಮ ನವಮಿ ಆಚರಿಸುವ ಮೂಲಕ ರಾಮನ ಹೆಸರಲ್ಲಿ ಏನುಮಾಡಿದರು ನಡೆಯುತ್ತದೆ ಎಂದು ಬಿಜೆಪಿಯವರು ಭಾವಿಸಿದ್ದಾರೆ.

ಹತ್ತು ವರ್ಷಗಳಲ್ಲಿ ಎಲ್ಲಾ ಹಬ್ಬಗಳು ಪೊಲೀಸ್ ಭದ್ರತೆಯಲ್ಲಿ ಆಚರಿಸುವ ಸ್ಥಿತಿ ನಿರ್ಮಾಣವಾಗಿದೆ. ಹತ್ತು ವರ್ಷಗಳ ಹಿಂದೆ ಪೊಲೀಸರ ಭದ್ರತೆ ಇಲ್ಲದೇ ಆಚರಸಲಾಗುತ್ತಿತ್ತು. ನಮ್ಮ ಪೊಲೀಸ್ ಸಿಬ್ಬಂದಿಗಳು ಸಹ ಹಬ್ಬ ಆಚರಿಸುತ್ತಿದ್ದರು. ಆದರೇ ಇದೀಗ ಸೆಕ್ಷನ್ 144 ಹಾಗೂ ಪೊಲೀಸ್ ಭದ್ರತೆಯಲ್ಲಿ ಎಲ್ಲಾ ಹಬ್ಬಗಳು ಆಚರಿಸುವ ಸ್ಥಿತಿ ಮೋದಿ ಸರಕಾರ ಮಾಡಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು