ಕಲಬುರಗಿ: ‘ಮಾ.16ರಂದು ಪ್ರಧಾನಿ ನರೇಂದ್ರ ಮೋದಿ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದಾರೆ. ಎನ್.ವಿ.ಮೈದಾನದಲ್ಲಿ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಲೋಕಸಭೆ ಚುನಾವಣೆಯ ಕ್ಷೇತ್ರದ ಉಸ್ತುವಾರಿ ಶರಣಪ್ಪ ತಳವಾರ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾರಂಭದ ಯಶಸ್ವಿಗೆ ಕಾರ್ಯಕರ್ತರು ಕ್ಷೇತ್ರದ 257 ಮತಗಟ್ಟೆ ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ. ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಮುಖಂಡ ಚಂದ್ರಶೇಖರ ಅವಂಟಿ, ಕಲಬುರಗಿ ಗ್ರಾಮಾಂತರ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್, ಜಿಲ್ಲೆ ಒಬಿಸಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್ ನೇತೃತ್ವದಲ್ಲಿ ನಾಲ್ಕು ತಂಡ ರಚಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮಾತನಾಡಿ, ‘ಸಮಾರಂಭದಲ್ಲಿ ಚಿತ್ತಾಪುರ ಕ್ಷೇತ್ರದಿಂದ 20 ಸಾವಿರ ಜನರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಚಂದ್ರಶೇಖರ ಅವಂಟಿ, ಮಲ್ಲಿಕಾರ್ಜುನ ಎಮ್ಮೆನೋರ್, ಬಸವರಾಜ ಬೆಣ್ಣೂರಕರ್, ನಾಗರಾಜ ಭಂಕಲಗಿ, ಮಲ್ಲಿಕಾರ್ಜುನ ಪೂಜಾರಿ, ನಾಗರಾಜ ಹೂಗಾರ, ರಮೇಶ ಬಮ್ಮನಳ್ಳಿ, ಸುರೇಶ ಬೆನಕನಳ್ಳಿ, ಬಾಲಾಜಿ ಬುರಬುರೆ, ದಶರಥ ದೊಡ್ಡಮನಿ, ಶಿವರಾಂ ಚವಾಣ್, ಕೋಟೇಶ್ವರ ರೇಷ್ಮಿ, ಪ್ರಸಾದ ಅವಂಟಿ, ಶಾಂತಕುಮಾರ ಮಳಖೇಡ, ಚಿದಾನಂದ ಹಚ್ಯಾಳ ಉಪಸ್ತೀತರಿದ್ದರು.