News Karnataka Kannada
Saturday, April 27 2024
ಕಲಬುರಗಿ

ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್.ಅಶೋಕ್: ಅಸಲಿ ಕಾರಣ ಏನು ಗೊತ್ತಾ?

ವಿಪಕ್ಷ ನಾಯಕ ಆರ್.ಅಶೋಕ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾದಾಗ ನಿರಾಕರಿಸಿದ್ದಾರೆ.
Photo Credit : NewsKarnataka

ಕಲಬುರಗಿ: ವಿಪಕ್ಷ ನಾಯಕ ಆರ್.ಅಶೋಕ್ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾದಾಗ ನಿರಾಕರಿಸಿದ್ದಾರೆ.

ಸಿದ್ದರಾಮಯ್ಯ ಹಿಂದೂ ವಿರೋಧಿ, ಕೇಸರಿ ಕಂಡರೆ ಆಗಲ್ಲ, ಕೇಸರಿ ಶಲ್ಯ ಧರಿಸಲ್ಲ, ಕುಂಕುಮ ಹಾಕಲ್ಲ ಎಂದೆಲ್ಲಾ ಟೀಕಿಸುವ ರಾಜ್ಯದ ಬಿಜೆಪಿ ನಾಯಕರು ತಮ್ಮ ನಾಯಕನ ಈ ನಡೆಗೆ ಏನು ಹೇಳುತ್ತಾರೆ.

ಈ ಹಿಂದೆ ಸದನದಲ್ಲಿ ತಮ್ಮನ್ನು ಹೊಗಳುವ ಭರದಲ್ಲಿ ಬಿಜೆಪಿಯನ್ನು ಬೆಂಬಲಿಸುವ ಬಜರಂಗದಳದ ಕಾರ್ಯಕರ್ತರ ವಿರುದ್ಧ “ನಾನು ಗೃಹಸಚಿವ ಆಗಿದ್ದಾಗ ಪಬ್‌ನಲ್ಲಿ ಗಲಾಟೆ ಆದಾಗ ಗೂಂಡಾ ಕಾಯ್ದೆ ಹಾಕಿದ್ದೆ” ಎಂದು ಹೇಳಿದ್ದರು. ಆ ಮೂಲಕ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತಿದ್ದ ಅವರು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದರು. ಇದೀಗ ಕುಂಕುಮ ಹಣೆಗೆ ಇಡಲು ನಿರಾಕರಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕಚೇರಿಗೆ ಆಗಮಿಸಿದ ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು.

ಈ ನಡುವೆ ಡಾ ವಿಶ್ವನಾಥ್ ಪವಾರ್ ಅವರು ಅಶೋಕ ಅವರ ಹಣೆಗೆ ಕುಂಕುಮ ಇಡಲು ಮುಂದಾಗಿದ್ದಾರೆ. ಆದರೆ ಅಶೋಕ ಅವರು ಕುಂಕುಮ ಹಚ್ಚದಂತೆ ತಡೆದಿದ್ದಾರೆ. ಬಳಿಕ ವಿಶ್ವನಾಥ್ ಶಾಲು ಹಾಕಿ ಸನ್ಮಾನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು