News Karnataka Kannada
Thursday, May 02 2024
ಕಲಬುರಗಿ

ಚಂದ್ರಯಾನಕ್ಕೆ ಕೆಲಸ ಮಾಡಿದ ವಿಜ್ಞಾನಿಗಳು ಹಿಂದುಳಿದ ವರ್ಗಗದವರು: ಬಿ.ಕೆ. ಹರಿಪ್ರಸಾದ್‌

BK Hariprasad: Statement against me to escape scams
Photo Credit : News Kannada

ಕಲಬುರಗಿ: ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ಇಸ್ರೋ) ಭೂಮಿ ಮಂಜೂರು ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಬಿ.ಕೆ ಹರಿಪ್ರಸಾದ್‌ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಬಿತ್ತಿ ಬೆಳೆದ ಮರದ ಹಣ್ಣುಗಳನ್ನು ಬಿಜೆಪಿ ತಿನ್ನುತ್ತಿದೆ ಎಂದು ಕಿಡಿಕಾರಿದರು. ಕಲಬುರಗಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್, ವೈಜ್ಞಾನಿಕ ಸಂಶೋಧನೆ ಮೇಲೆ ಕಾಂಗ್ರೆಸ್ ಪಕ್ಷಕ್ಕೆ ದೃಢವಾದ ನಂಬಿಕೆ ಇದೆ. ಕುರುಡು ನಂಬಿಕೆಗಳೊಂದಿಗೆ ಪ್ರಯಾಣಿಸುವುದಕ್ಕೆ ನಾವು ಬಿಜೆಪಿ ಪಕ್ಷ ಅಲ್ಲ ಎಂದರು. ಚಂದ್ರಯಾನ-3 ಮಿಷನ್‌ಗಾಗಿ ಕೆಲಸ ಮಾಡಿದ ವಿಜ್ಞಾನಿಗಳು ಹಿಂದುಳಿದ ವರ್ಗಗಳಿಗೆ ಸೇರಿದವರು ಎಂದರು. ಬಿಜೆಪಿಯ ‘ಒಂದು ರಾಷ್ಟ್ರ ಒಂದು ಚುನಾವಣೆ’ ಘೋಷಣೆ ಕುರಿತು ಪ್ರತಿಕ್ರಿಯಿಸಿದ ಹರಿಪ್ರಸಾದ್, ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ದೇಶದ ವೈವಿಧ್ಯತೆ ನಾಶವಾಗುತ್ತಿದೆ. ಅದೇ ರೀತಿ ಸ್ವಾಮಿ ವಿವೇಕಾನಂದ ಅನುಯಾಯಿಗಳು ಎಂದು ಹೇಳುವ ಬಿಜೆಪಿ ಅವರ ಆಶಯಕ್ಕೆ ವಿರುದ್ಧವಾ ಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.

ಸಂಪುಟದಿಂದ ತಮ್ಮನ್ನು ಹೊರಗಿಟ್ಟಿರುವ ಬಗ್ಗೆ ಮಾತನಾಡಿದ ಹರಿಪ್ರಸಾದ್, ನಾನು ನಿಷ್ಠಾವಂತ ಕಾಂಗ್ರೆಸ್ಸಿಗ. ನನ್ನ ಪ್ರತಿಭಟನೆ ಸಚಿವ ಸ್ಥಾನ ಕೇಳಲು ಅಲ್ಲ. ಸಣ್ಣ ಸಮುದಾಯಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವಿಚಾರವಾಗಿ ಬೀದಿಗಿಳಿಯಲು ನಾನು ಸಿದ್ಧ ”ಎಂದು ಹರಿಪ್ರಸಾದ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು