News Karnataka Kannada
Tuesday, April 30 2024
ಕಲಬುರಗಿ

ವಿದೇಶಕ್ಕೆ ಓದಲು ಹೋಗುವ ಮಕ್ಕಳನ್ನು ನಿಲ್ಲಿಸಿ ಧರ್ಮ, ಗೋ ರಕ್ಷಣೆಗೆ ಪ್ರೇರಣೆ : ಪ್ರಿಯಾಂಕ್ ಖರ್ಗೆ

Priyankmkhgre
Photo Credit : News Kannada

ಕಲಬುರಗಿ: ಇತ್ತೀಚಿಗೆ ಶಾʻಲ್ ಹಾಕಿಸಿ ಬಡವರ ಮಕ್ಕಳನ್ನು ಧರ್ಮ ರಕ್ಷಣೆಗೆ ಹಾಗೂ ಗೋ ರಕ್ಷಣೆಗೆ ಕಳಿಸಲಾಗುತ್ತಿದೆ. ಅಚ್ಚರಿ ಎಂದರೆ ಅವರ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ. ಧರ್ಮ ರಕ್ಷಣೆಗೂ ತಮ್ಮ ಮಕ್ಕಳನ್ನು ಯಾಕೆ ಕಳಿಸುವುದಿಲ್ಲ ? ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಆಳಂದ ಪಟ್ಟಣದಲ್ಲಿ ನಡೆದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡ ಅಂದಾಜು ಮೊತ್ತ ರೂ 800 ಲಕ್ಷ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂದಾಜು ಮೊತ್ತ ರೂ 625.95 ಲಕ್ಷ ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿ ವೈಜ್ಞಾನಿಕ ಮನೋಭಾವನೆಗೆ ಒತ್ತು ನೀಡದೆ 5000 ಹಿಂದಿನ ಆಚರಣೆಗಳನ್ನು ಅನುಸರಿಸುವಂತೆ ಕರೆ ನೀಡುತ್ತಾ ಅವುಗಳನ್ನು ಅಳವಡಿಸಿಕೊಳ್ಳುವಂತೆ ಇಂಡಿಯನ್ ಸೈನ್ಸ್ ಕಾಂಗ್ರೆಸ್ ನ ಕಾರ್ಯಕ್ರಮದಲ್ಲಿ ಹೇಳುತ್ತಾರೆ. ನಾನು ಹೇಳುವುದು ಇಷ್ಟೆ, ಎಲ್ಲವನ್ನೂ ಮಕ್ಕಳು ಓದಲಿ ಆದರೆ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ನಾನು ಇತ್ತೀಚಿಗೆ ಅಮೇರಿಕಾಗೆ ಹೋದಾಗ ನಮ್ಮ ರಾಜ್ಯದ ಐತಿಹಾಸಿಕ ಹಿನ್ನೆಲೆಯ ಬಗ್ಗೆ ಅಲ್ಲಿ ವಿವರಿಸಿ ಹೇಳಬೇಕಿತ್ತು. ಅಲ್ಲಿನ ಕಂಪನಿಗಳ ಪ್ರಮುಖರು ಭಾರತದಲ್ಲಿ ಬಂಡವಾಳ ಹೂಡುವುದಕ್ಕೆ ಆಸಕ್ತಿತೋರಿಸಿದ್ದರು ಕಾರಣ ಇಲ್ಲಿನ ಮಾನವಸಂಪನ್ಮೂಲ. ಈ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಗ್ಗೆ ಅವರು ಉತ್ಸುಕರಾಗಿದ್ದಾರೆ. ಇದಕ್ಕೆ ಗುಣಮಟ್ಟದ ಶಿಕ್ಷಣ ಕಾರಣವಾಗಿದೆ ಎಂದರು.

ಮಾನವ ಸಂಪನ್ಮೂಲ ನಮ್ಮ ದೇಶದ ಪ್ರಬಲ ಶಕ್ತಿಯಾಗಿದೆ. ನಮ್ಮ ಮಾನವ ಸಂಪನ್ಮೂಲಕ್ಕೆ ಇಡೀ ವಿಶ್ವದಲ್ಲೇ ಬೇಡಿಕೆ ಇದೆ. ಸಶಕ್ತ ರಾಷ್ಟ್ರ ನಿರ್ಮಾಣವಾಗಬೇಕಾದರೆ ಯುವಶಕ್ತಿಯನ್ನು ಬೆಳೆಸಬೇಕು. ಯುವಕರ ಸಂಖ್ಯಾಬಲಕ್ಕೆ ಸರಿಯಾದ ಶಿಕ್ಷಣ ನೀಡಿದಾಗ ಮಾತ್ರ ರಾಷ್ಟ್ರ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಅಣೆಕಟ್ಟು ಹಾಗೂ ರಸ್ತೆ ನಿರ್ಮಾಣದ ಜೊತೆಗೆ ಯುವಶಕ್ತಿಗೆ ವೈಜ್ಞಾನಿಕ ಶಿಕ್ಷಣ ನೀಡಿದಾಗ ಮಾತ್ರ ಸುಭದ್ರ ರಾಷ್ಟ್ರ ವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಗುಣಮಟ್ಟದ ಶಿಕ್ಷಣ ಹಾಗೂ ವೈಜ್ಞಾನಿಕ ಮನೋಭಾವನೆ ಸಮೃದ್ಧ ಮಾನವಸಂಪನ್ಮೂಲ ದ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದ ಖರ್ಗೆ ಅವರು ಸಂವಿಧಾನದಅಡಿಯಲ್ಲಿ ದೊರಕುವ ಸೌಲಭ್ಯಗಳನ್ನು ಬಳಸಿಕೊಂಡು ಎಲ್ಲರೂ ಉತ್ತಮ ಶಿಕ್ಷಣದೊಂದಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು, ಬಿ.ಆರ್.ಪಾಟೀಲ್ ಅವರಂತ ಪ್ರಗತಿಪರ ಮನೋಭಾವದವರಿದ್ದು ಇದರಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು