ಕಲಬುರಗಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬ್ಯಾಗ್ನಲ್ಲಿದ್ದ ಬಾಂಬ್ ಬ್ಲಾಸ್ಟ್ ಆದ ಬೆನ್ನಲ್ಲೇ ರಾಜ್ಯದೆಲ್ಲೆಡೆ ಪೊಲೀಸರು ಅಲರ್ಟ್ ಆಗಿದ್ದು, ಬಸ್ ಸ್ಟ್ಯಾಂಡ್, ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್ ಪರಿಶೀನಲೆ ನಡೆಸಿದ್ದಾರೆ. ಇದರ ಮಧ್ಯೆ ಕಲಬುರಗಿ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿದ್ದು, ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಬಸ್ ಸ್ಟಾಪ್ ನಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿದೆ. ಬಹಳ ಹೊತ್ತು ಅದೇ ಸ್ಥಳದಲ್ಲಿ ಬ್ಯಾಗ್ ಯಾರಿಗೆ ಸೇರಿದ್ದು ಎಂದು ತಿಳಿಯದೆ ಸ್ಥಳೀಯರು ಪೊಲೀಸರಿಗೆ ಕರೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ಬಾಂಬ್ ಸ್ಕ್ವಾಡ್ ದಳ ಬ್ಯಾಗ್ ತಪಾಸಣೆ ನಡೆಸಿತು.
ಬ್ಯಾಗ್ನಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪೊಲೀಸರು ಬ್ಯಾಗ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.