Categories: ಕಲಬುರಗಿ

ನಿನ್ನೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ನಿನ್ನೆ ಮೊದಲನೇ ಹಂತದ ಚುನಾವಣೆ ಮುಗಿದಿದ್ದು, ಅದರಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

ಈ ವಿಚಾರದ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು, ಎಲ್ಲಾ ಅಭ್ಯರ್ಥಿ ಮತ್ತು ಮಂತ್ರಿಗಳ ಜೊತೆ ಮಾತನಾಡಿದ್ದೇನೆ. ನಮ್ಮ 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಈ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ನಮ್ಮ ಸರ್ಕಾರದ ಸಾಧನೆ ಪ್ರಸ್ತಾಪ ಮಾಡಿದ್ದೇವೆ.

ನರೇಂದ್ರ ಮೋದಿ ಈ ದೇಶದ ಪ್ರಧಾನಮಂತ್ರಿಯಾಗಿ ಸುಳ್ಳಿನ ಮಾರುಕಟ್ಟೆ ಮಾಡುತ್ತಿದ್ದಾರೆ. ಹಿಂದುಳಿದವರ ಮೀಸಲಾತಿ ಆರ್ಟಿಕಲ್ 15 ಮತ್ತು 16ರ ಪ್ರಕಾರ ಈ ಸಮಾಜದಲ್ಲಿ ಅವರಿಗೆ ಮೀಸಲಾತಿ ಕೊಡಬೇಕಾಗಿದೆ ಎಂದರು. ಇ

ರಾಜೀವ್ ಗಾಂಧಿ ಪ್ರಧಾನ ಮಂತ್ರಿ ಆದಾಗ ಆರ್ಟಿಕಲ್ 73&74 ಕಾನೂನು ಜಾರಿಗೆ ತಂದು ಮಹಿಳೆಯರಿಗೆ ಮೀಸಲಾತಿ ತಂದರು. ಆದರೆ ಅದು ಅವರ ಕಾಲದಲ್ಲಿ ಜಾರಿ ಆಗಲಿಲ್ಲ, ನರಸಿಂಗ್ ರಾವ್ ಕಾಲದಲ್ಲಿ ಜಾರಿ ಆಯಿತು. ಕರ್ನಾಟಕದಲ್ಲಿ ಬಿಸಿಎಂ ಎ ಮತ್ತು ಬಿ ಅಂತ ರಿಸರ್ವೇಶನ್ ಮಾಡಿದ್ದೇವೆ.

ಈ ಮೂಲಕ ಮಹಿಳೆಯರಿಗೆ 33% ಮೀಸಲಾತಿ ಮಾಡಿದೆವು. ಹಿಂದುಳಿದವರಿಗೆ 33% ಮೀಸಲಾತಿ ಮಾಡಿದ್ದು, 6.6% ಬಿಸಿಎಂ ಬಿಯವರಿಗೆ ಮೀಸಲಾತಿ ಕೊಡಲಾಯಿತು. ಇದೆಲ್ಲ 1994-95ರಲ್ಲಿ ನಾನು ಹಣಕಾಸು ಮಂತ್ರಿ ಇದ್ದಾಗ ಮಾಡಿದ್ದೆವು. ಹಿಂದುಳಿದವರ ಮೀಸಲಾತಿಯಲ್ಲಿ ಮುಸ್ಲಿಮರನ್ನು ಸೇರಿಸಲಾಗಿದೆ. ಆದರೆ ಬಿಜೆಪಿ ರಾಮಾಜೋಯಿಸ್ ಈ ಮೀಸಲಾತಿ ಪ್ರಶ್ನೆ ಮಾಡಿ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದರು. ಖುದ್ದು ಅವರೇ ವಾದ ಮಂಡಿಸಿದ್ದರು.

ಆದರೆ ಸುಪ್ರೀಂಕೋರ್ಟ್ ಮೀಸಲಾತಿ ಎತ್ತಿ ಹಿಡಿಯಿತು. ಶಿಕ್ಷಣದಲ್ಲಿ ಹಾಗು ಉದ್ಯೋಗದಲ್ಲಿ ಚಿನ್ನಪ್ಪ ರೆಡ್ಡಿ ಅವರ ಮೀಸಲಾತಿ ಶಿಫಾರಸು ಮಾಡಿದರು. ಅದನ್ನು ವೀರಪ್ಪ ಮೋಯ್ಲಿ ಕಾಲದಲ್ಲಿ ಶಿಫಾರಸು ಮಾಡಿದ್ರೆ ದೇವೇಗೌಡರ ಕಾಲದಲ್ಲಿ ಜಾರಿ ಆಯಿತು ಎಂದು ಹೇಳಿದರು.

ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅದನ್ನು ಬಿಟ್ಟು ಏನು ಮಾಡಿದ್ದಾರೆ? ಜನರ ಭಾವನೆಗಳ ಜೊತೆ ಸರಿ ಇಲ್ಲ. ಪ್ರಧಾನಿ ಆಗಿ ಇಂತಹ ಹೇಳಿಕೆ ಪ್ರಧಾನಿ ಸ್ಥಾನಕ್ಕೆ ಗೌರವ ತರಲ್ಲ. ಇದರಿಂದ ನಮಗೆ ಏನು ಧಕ್ಕೆ ಆಗಲ್ಲ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಕೇಂದ್ರ ಏನು ಮಾಡಿದೆ ಅದರ ಬಗ್ಗೆ ಜನರ ತೀರ್ಪು ಅಂತಿಮ. ಜನ ನಮ್ಮ 5 ಗ್ಯಾರಂಟಿ ಇಂಪ್ಯಾಕ್ಟ್ ಆಗಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡುತ್ತಾರೆ. ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ವಿಶ್ವಾಸ ಬಂದಿದೆ ಎಂದರು.

 

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

25 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

39 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

52 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago