ಕಲಬುರಗಿ: ಜಿಲ್ಲೆಯಲ್ಲಿ ಕೂಲಿ ಕೆಲಸಕ್ಕೆಂದು ತೆರಳಿದ್ದ ಇಬ್ಬರು ಮಹಿಳೆಯರನ್ನು ಹಾಡುಹಗಲೇ ತಲೆಯ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಹೊರ ವಲಯದ ತಾವರಗೇರಾ ಕ್ರಾಸ್ ಬಳಿ ನಡೆದಿದೆ.ಶರಣಮ್ಮ (51) ಹಾಗೂ ಚಂದಮ್ಮ (53) ಕೊಲೆಯಾದ ಮಹಿಳೆಯುರು.
ಮೃತ ಶರಣಮ್ಮ ಕಲಬುರಗಿಯ ಕೆ.ಕೆ ನಗರ ನಿವಾಸಿ. ಚಂದಮ್ಮ ತಾಜ್ ಸುಲ್ತಾನಪುರ ನಿವಾಸಿ. ಕೂಲಿ ಕೆಲಸಕ್ಕೆಂದು ನಗರದ ಗಂಜ್ ಪ್ರದೇಶ ದಿಂದ ಬಸ್ ನಲ್ಲಿ ಕೆಲಸಕ್ಕೆ ಹೋಗಿದ್ದರು. ಇದೇ ವೇಳೆ ದುಷ್ಕರ್ಮಿಗಳು ಆ ಇಬ್ಬರು ಮಹಿಳೆಯರ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಆದರೆ ಈ ಇಬ್ಬರ ಕೊಲೆಯ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇನ್ನು ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಕ್ಷಣ ಬೇಟಿ ನೀಡಿ ಪರಿಶೀಲಿಸಿದ್ದಾರೆ.ಈ ಘಟನೆ ಸಂಬಂಧ ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.