ಕಲಬುರಗಿ: ಲೋಕಸಭೆ ಚುನಾವಣೆ ಹತ್ತಿರವಿರುವಾಗಲೇ ಕರ್ನಾಟಕಕ್ಕೆ ವಂದೇ ಭಾರತ್ ರೈಲನ್ನು ಕೊಡುಗೆಯಾಗಿ ನೀಡಲಾಗಿದೆ. ಮಾರ್ಚ್ 12ರಂದು ಕರ್ನಾಟಕದ ಹೊಸ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಬೆಂಗಳೂರು-ಕಲಬುರಗಿಗೆ ನಡುವೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎನ್ನುವ ಬೇಡಿಕೆಯನ್ನು ಇಡಲಾಗಿತ್ತು.
ಕಲಬುರಗಿ ಸಂಸದ ಡಾ ಉಮೇಶ್ ಜಾಧವ್ ಲೋಕಸಭೆ ಕಲಾಪದಲ್ಲಿ ಸಭಾಪತಿಗಳ ಮೂಲಕ ಈ ಕುರಿತು ರೈಲ್ವೆ ಸಚಿವರ ಗಮನವನ್ನು ಸೆಳೆದಿದ್ದರು. ಈಗ ಬೆಂಗಳೂರು-ಕಲಬುರಗಿ ಸಂಪರ್ಕಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಾರ್ಚ್ 12ರಂದು ಈ ಹೊಸ ರೈಲು ಸೇವೆಗೆ ಚಾಲನೆ ಸಿಗಲಿದೆ.
ಬೆಂಗಳೂರಿನಿಂದ ಹೊರಡುವ ರೈಲು ಮಹಾರಾಷ್ಟ್ರದ ಮೂಲಕ ಕಲಬುರಗಿ ತಲುಪಲಿದೆ.ಮಾಹಿತಿ, ವಿವರ: Kalyana-Karnataka Railway Development ಎಂಬ ಟ್ವೀಟ್ ಖಾತೆಯಲ್ಲಿ ಗುರುವಾರ ಈ ಕುರಿತು ಮಾಹಿತಿ ನೀಡಲಾಗಿದೆ.
ಕರ್ನಾಟಕದ ಹೊಸ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12ರಂದು ಚಾಲನೆ ನೀಡಲಿದ್ದಾರೆ ಎಂದು ತಿಳಿಸಲಾಗಿದೆ.