News Karnataka Kannada
Thursday, May 09 2024
ಕಲಬುರಗಿ

ಮಾರ್ಚ್ 12 ರಂದು ಕಲಬುರಗಿಗೆ ವಂದೇ ಭಾರತ್‌ ರೈಲು

ಲೋಕಸಭೆ ಚುನಾವಣೆ ಹತ್ತಿರವಿರುವಾಗಲೇ ಕರ್ನಾಟಕಕ್ಕೆ ವಂದೇ ಭಾರತ್ ರೈಲನ್ನು ಕೊಡುಗೆಯಾಗಿ ನೀಡಲಾಗಿದೆ. ಮಾರ್ಚ್ 12ರಂದು ಕರ್ನಾಟಕದ ಹೊಸ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
Photo Credit : News Kannada

ಕಲಬುರಗಿ: ಲೋಕಸಭೆ ಚುನಾವಣೆ ಹತ್ತಿರವಿರುವಾಗಲೇ ಕರ್ನಾಟಕಕ್ಕೆ ವಂದೇ ಭಾರತ್ ರೈಲನ್ನು ಕೊಡುಗೆಯಾಗಿ ನೀಡಲಾಗಿದೆ. ಮಾರ್ಚ್ 12ರಂದು ಕರ್ನಾಟಕದ ಹೊಸ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಬೆಂಗಳೂರು-ಕಲಬುರಗಿಗೆ ನಡುವೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎನ್ನುವ ಬೇಡಿಕೆಯನ್ನು ಇಡಲಾಗಿತ್ತು.

ಕಲಬುರಗಿ ಸಂಸದ ಡಾ ಉಮೇಶ್ ಜಾಧವ್ ಲೋಕಸಭೆ ಕಲಾಪದಲ್ಲಿ ಸಭಾಪತಿಗಳ ಮೂಲಕ ಈ ಕುರಿತು ರೈಲ್ವೆ ಸಚಿವರ ಗಮನವನ್ನು ಸೆಳೆದಿದ್ದರು. ಈಗ ಬೆಂಗಳೂರು-ಕಲಬುರಗಿ ಸಂಪರ್ಕಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಾರ್ಚ್ 12ರಂದು ಈ ಹೊಸ ರೈಲು ಸೇವೆಗೆ ಚಾಲನೆ ಸಿಗಲಿದೆ.

ಬೆಂಗಳೂರಿನಿಂದ ಹೊರಡುವ ರೈಲು ಮಹಾರಾಷ್ಟ್ರದ ಮೂಲಕ ಕಲಬುರಗಿ ತಲುಪಲಿದೆ.ಮಾಹಿತಿ, ವಿವರ: Kalyana-Karnataka Railway Development ಎಂಬ ಟ್ವೀಟ್ ಖಾತೆಯಲ್ಲಿ ಗುರುವಾರ ಈ ಕುರಿತು ಮಾಹಿತಿ ನೀಡಲಾಗಿದೆ.

ಕರ್ನಾಟಕದ ಹೊಸ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12ರಂದು ಚಾಲನೆ ನೀಡಲಿದ್ದಾರೆ ಎಂದು ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು