ಕಲಬುರಗಿ: ಒಂಟಿ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಮಹಿಳೆಯನ್ನು ಲಿಂಗಮ್ಮ ಎಂದು ಗುರುತಿಸಲಾಗಿದೆ. ಈಕೆ ಹೊಲದಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಂತೆ 6 ರಿಂದ 7 ಜನರ ಗುಂಪೊಂದು ಕಬ್ಬಿಣದ ರಾಡ್, ಚಾಕು ಹಾಗೂ ಕಲ್ಲಿನಿಂದ ಲಿಂಗಮ್ಮನ ಮೇಲೆ ಏಕಾಎಕಿ ಹಲ್ಲೆ ನಡೆಸಿದ್ದಾರೆ. ಸದ್ಯ ಲಿಂಗಮ್ಮನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.
ಲಿಂಗಮ್ಮ ನಾರಾಯಣ ಎಂಬುವರ ಹೊಲದಲ್ಲಿ ಪಾಲುದಾರಿಕೆಯಲ್ಲಿ ವ್ಯವಸಾಯ ಮಾಡುತ್ತಿದ್ದು ಇದನ್ನು ನಾರಾಯಣ ಅವರ ಹೊಲ, ನಿನ್ಯಾಕೆ ಪಾಲುದಾರಿಕೆಯಲ್ಲಿ ಮಾಡ್ತಿಯಾ ಎಂದು ಪ್ರಶ್ನಿಸಿ, ಅಶೋಕ್ ಅಂಬಲಾಳ, ಮಲ್ಲು ಸಾಸನೂರ, ಸುರೇಶ್ ಸಾಸನೂರ, ಮಹೇಶ್ ಸಾಸನೂರ, ದಂಡವ್ವ ಹಾಗೂ ಜಗದೇವಪ್ಪ ಎಂಬುವವರು ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.