News Karnataka Kannada
Friday, May 03 2024
ಕಲಬುರಗಿ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ: ಸಿಎಂ ರಾಷ್ಟ್ರಧ್ವಜಾರೋಹಣ

Kalyana Karnataka Amrutha Mahotsava Day: CM hoists national flag
Photo Credit : News Kannada

ಕಲಬುರಗಿ: ಇಂದು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ದಾರ್ ವಲ್ಲಭಭಾಯ್ ಪಟೇಲ್ ಭಾವಚಿತ್ರಕ್ಕೆ ಸಿಎಂ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಕಲಬುರಗಿ ನಗರದ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಭಾರತಕ್ಕೆ ಆಗಸ್ಟ್ 15, 1947ರಂದು ಸ್ವಾತಂತ್ರ್ಯ ದೊರೆತರೂ, ಅವಿಭಜಿತ ಆಂಧ್ರ ಪ್ರದೇಶ, ಮಹಾರಾಷ್ಟ್ರದ ಕೆಲ ಪ್ರದೇಶಗಳು ಮತ್ತು ಉತ್ತರ ಕರ್ನಾಟಕದ ಕಲಬುರಗಿ, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳು ಹೈದರಾಬಾದ್ ನಿಜಾಮರ ರಾಜಾಡಳಿತದಲ್ಲೇ ಮುಂದುವರಿದಿತ್ತು.

ಭಾರತ ಒಕ್ಕೂಟದ ಜೊತೆಗೆ ಹೈದರಬಾದ್ ರಾಜ್ಯವನ್ನು ವಿಲೀನಗೊಳಿಸಲು ನಿಜಾಮ್ ರಾಜ ನಿರಾಕರಿಸಿದ್ದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರಯತ್ನದ ಫಲವಾಗಿ ಸೆಪ್ಟೆಂಬರ್ 17, 1948 ರಂದು ಹೈದರಾಬಾದ್ ರಾಜ್ಯ ಭಾರತ ಒಕ್ಕೂಟದೊಂದಿಗೆ ವಿಲೀನವಾಯಿತು. ಈ ದಿನದ ಸವಿ ನೆನಪಿಗೆ ‘ಕಲ್ಯಾಣ ಕರ್ನಾಟ ಅಮೃತ ಮಹೋತ್ಸವ’ ಆಚರಣೆ ಮಾಡಲಾಗ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು