ಕಲಬುರಗಿ: ಇಂದು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ದಾರ್ ವಲ್ಲಭಭಾಯ್ ಪಟೇಲ್ ಭಾವಚಿತ್ರಕ್ಕೆ ಸಿಎಂ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಕಲಬುರಗಿ ನಗರದ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಭಾರತಕ್ಕೆ ಆಗಸ್ಟ್ 15, 1947ರಂದು ಸ್ವಾತಂತ್ರ್ಯ ದೊರೆತರೂ, ಅವಿಭಜಿತ ಆಂಧ್ರ ಪ್ರದೇಶ, ಮಹಾರಾಷ್ಟ್ರದ ಕೆಲ ಪ್ರದೇಶಗಳು ಮತ್ತು ಉತ್ತರ ಕರ್ನಾಟಕದ ಕಲಬುರಗಿ, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳು ಹೈದರಾಬಾದ್ ನಿಜಾಮರ ರಾಜಾಡಳಿತದಲ್ಲೇ ಮುಂದುವರಿದಿತ್ತು.
ಭಾರತ ಒಕ್ಕೂಟದ ಜೊತೆಗೆ ಹೈದರಬಾದ್ ರಾಜ್ಯವನ್ನು ವಿಲೀನಗೊಳಿಸಲು ನಿಜಾಮ್ ರಾಜ ನಿರಾಕರಿಸಿದ್ದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರಯತ್ನದ ಫಲವಾಗಿ ಸೆಪ್ಟೆಂಬರ್ 17, 1948 ರಂದು ಹೈದರಾಬಾದ್ ರಾಜ್ಯ ಭಾರತ ಒಕ್ಕೂಟದೊಂದಿಗೆ ವಿಲೀನವಾಯಿತು. ಈ ದಿನದ ಸವಿ ನೆನಪಿಗೆ ‘ಕಲ್ಯಾಣ ಕರ್ನಾಟ ಅಮೃತ ಮಹೋತ್ಸವ’ ಆಚರಣೆ ಮಾಡಲಾಗ್ತಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…