ಕೊಪ್ಪಳ : ಭಾನುವಾರದಂದು ಕಲ್ಯಾಣ ಕರ್ನಾಟಕದಲ್ಲಿ ಸುರಿದ ಅಕಾಲಿಕ ಮಳೆಗೆ ಜನ ತತ್ತರಿಸಿದ್ದು, ಜೊತೆಗೆ ಭಾರಿ ಗಾಳಿಯಿಂದ ಬೆಳೆ ಕೂಡ ಹಾನಿಯಾಗಿದೆ. ಸಿಡಿಲಿನ ಹೊಡೆತಕ್ಕೆ ಯುವಕರಿಬ್ಬರು ಬಲಿಯಾಗಿದ್ದು, ಎರಡು ಜಾನುವಾರುಗಳು ಸಹ ಸಾವನ್ನಪ್ಪಿವೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಾಟಾಪುರ ಗ್ರಾಮದ 28 ವರ್ಷದ ಲಕ್ಷ್ಮಣ ಮಲ್ಲಪ್ಪ ಅಂಬಿಗೇರ ಹಾಗೂ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಬಂಕನೇರಿ ಗ್ರಾಮದ 21 ವರ್ಷದ ನಾಗರಾಜ ನಾಗೂರ ಸಿಡಿಲು ಬಡಿದು ಸಾವನಪ್ಪಿದ ನತದೃಷ್ಟರು.
ಬಿರುಗಾಳಿ, ಗುಡುಗು ಸಮೇತ ಸುರಿದ ಆಲಿಕಲ್ಲು ಮಳೆಗೆ ಹಲವು ಮರಗಳು ಉರುಳಿ ಬಿದ್ದಿದ್ದು, ಕೆಲವಡೆ ಬೆಳೆ ಸಹ ನಾಶವಾಗಿದೆ. ಅಲ್ಲದೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಾಪುರ ಸರ್ಕಾರಿ ಪ್ರೌಢ ಶಾಲೆಯ ತಗಡಿನ ಛಾವಣಿ ನೆಲಕ್ಕುರುಳಿದೆ.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…