News Karnataka Kannada
Monday, May 06 2024
ಕೊಪ್ಪಳ

ದ್ವಿಚಕ್ರವಾಹನ ಹಾಗೂ ಕಾರು ನಡುವೆ ಅಪಘಾತ: ಸಂಸದ ಸಂಗಣ್ಣ ಕರಡಿ ಸಹೋದರ ಸಾವು

Woman killed in accident, son Ashwin and husband critically injured
Photo Credit :

ಕೊಪ್ಪಳ: ದ್ವಿಚಕ್ರವಾಹನ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸಂಸದ ಸಂಗಣ್ಣ ಕರಡಿ ಸಹೋದರ ಬಸವರಾಜ ಕರಡಿ (58) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಟಣಕನಕಲ್ ಗ್ರಾಮದ ಬಳಿ ನಡೆದಿದೆ.

ಮೃತ ಬಸವರಾಜ ಕರಡಿ ಅವರು ಕೊಪ್ಪಳದಿಂದ ಟಣಕನಕಲ್‌ಗೆ ಹೋಗುತ್ತಿದ್ದರು. ಯಲಮಗೇರಿಯಿಂದ ಕೊಪ್ಪಳಕ್ಕೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸವರಾಜ ಕರಡಿ ಅವರಿಗೆ ಅಪಘಾತವಾದ ತಕ್ಷಣವೇ ಜಿಲ್ಲಾಸ್ಪತ್ರೆಗೆ ಕರೆತರಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆಸ್ಪತ್ರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹಾಗೂ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಬಸವರಾಜ ಕರಡಿ ಮೃತದೇಹವನ್ನು ಟಣಕನಕಲ್ ಗ್ರಾಮ ಅವರ ನಿವಾಸ ದಲ್ಲಿ ಅಂತಿಮ ದರ್ಶನ ಇಡಲಾಗಿತ್ತು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಉದಯ್ ರವಿ, ಮಾಜಿ ಸಂಸದ ವಿರೂಪಾಕ್ಷಪ್ಪ ಸೇರಿ ಹಲವರು ಅಂತಿಮ ದರ್ಶನ ಪಡೆದರು.
ಸೋಮವಾರ ಸಂಜೆ ಹನುಮನಹಳ್ಳಿ ಗ್ರಾಮದ ತೋಟದಲ್ಲಿ ಬಸವರಾಜ ಕರಡಿಯವರ ಅಂತ್ಯಕ್ರಿಯೆ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು