News Karnataka Kannada
Friday, May 03 2024
ಕೊಪ್ಪಳ

ಸರ್ಕಾರಿ ಅಧಿಕಾರಿಗಳಿಗೆ ಸಚಿವ ಹಾಲಪ್ಪ ಖಡಕ್ ಎಚ್ಚರಿಕೆ

Halappa Achar
Photo Credit :
ಕೊಪ್ಪಳ :  ರಾಜಕಾರಣಿಗಳು, ಸರ್ಕಾರಿ  ಅಧಿಕಾರಿಗಳು  ಇರುವುದು ಜನರ ಸೇವೆಗಾಗಿ. ಆದ್ದರಿಂದ ಎಲ್ಲರೂ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ. ಆದರೆ, ಹಗಲು-ರಾತ್ರಿ ನಿಮ್ಮ ಮೊಬೈಲ್‌ ಸ್ವಿಚ್‌ಆಫ್‌ ಆಗಂಗಿಲ್ಲಾ , ಸಬೂಬ ಹೇಳುವಂತೆಯೇ ಇಲ್ಲ. ಇದು ತಮ್ಮ ಮೊದಲ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಆಚಾರ್‌ ಅವರ ಖಡಕ್‌ ಎಚ್ಚರಿಕೆ.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕೋವಿಡ್‌-19 ಮೂರನೇ ಅಲೆ ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾನು ಯಾವುದೇ ಒತ್ತಡ ಹಾಕುವುದಿಲ್ಲ, ನೀವು ನಿಮ್ಮ ಪಾಡಿಗೆ ನಿಯಮಾನುಸಾರ ಕಾರ್ಯ ನಿರ್ವಹಿಸಿ, ಫೈಲ್‌ಗಳನ್ನು ಪೆಂಡಿಂಗ್‌ ಇಡುವಂತೆ ಇಲ್ಲ.
ಕೆಲಸಗಳನ್ನು ವಿಳಂಬ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ . ಹಾಗಂತ ನಾನು ಬರಿ ಕೆಲಸಕ್ಕಾಗಿ ಸತಾಯಿಸುವುದಿಲ್ಲ, ಸರಿಯಾಗಿ ಕೆಲಸ ಮಾಡಿದರೇ ಬೆನ್ನು ಚಪ್ಪರಿಸುತ್ತೇನೆ. ಶ್ರದ್ಧೆಯಿಂದ ಹಗಲಿರಳು ಕೆಲಸ ಮಾಡಿ, ರಾಜ್ಯದಲಿಯೇ ಮಾದರಿ ಜಿಲ್ಲೆಯನ್ನು ಮಾಡೋಣ. ಹಾಗೆ ಮಾಡುವ ಮನಸ್ಸು ಇಲ್ಲದಿದ್ದರೆ ನಿಮ್ಮ ದಾರಿಯನ್ನು ನೀವು ನೋಡಿ, ರಾಜ್ಯವಿಶಾಲವಾಗಿದೆ ಎನ್ನುವ ಸಂದೇಶವನ್ನು ಕಳುಹಿಸಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು