ಕೊಪ್ಪಳ : ರಾಜ್ಯದಲ್ಲಿ ಹಿಜಾಬ್, ವ್ಯಾಪಾರ ನಿಷೇಧದ ಬಳಿಕ, ಈಗ ಹಲಾಲ್ ಮಾಂಸ ನಿಷೇಧ ಅಭಿಯಾನ ಆರಂಭಗೊಂಡಿದೆ. ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಕೆಲಸ ಏನೂ ಇಲ್ಲ ಇದು ಆದಷ್ಟು ಬೇಗ ಸರಿಯಾಗುತ್ತದೆ ಎಂದರು.
ಕಾಂಗ್ರೆಸ್ ಪಕ್ಷ ಎತ್ತಿಕಟ್ಟಿ ರಾಜಕಾರಣ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷ ಅಪಾಯಕಾರಿ ಎಂದು ಜನ ದೂರ ಇಟ್ಟಿದ್ದಾರೆ. ನಾನು ಕಣ್ಣಲ್ಲಿ ಕಣ್ಣಿಟ್ಟು ಪೊಲೀಸ್ ಇಲಾಖೆಯನ್ನ ಕಾಯುತ್ತಿದ್ದೇನೆ.
ನಾನು ಅಧಿಕಾರಕ್ಕೆ ಬಂದ ಬಳಿಕ ಪೋಸ್ಟಿಂಗ್ಗೆ ಹಣ ಕೊಟ್ಟಿಲ್ಲ. ಬಿ.ಕೆ.ಹರಿಪ್ರಸಾದ್ ಚಿಲ್ಲರೆ ರಾಜಕಾರಣ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.