News Karnataka Kannada
Thursday, May 02 2024
ಕೊಪ್ಪಳ

ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವಂತಿಲ್ಲ: ಬಿ ಸಿ ನಾಗೇಶ್

Untitled 1
Photo Credit :

ಕೊಪ್ಪಳ: ಯಾವುದೇ ಕಾರಣಕ್ಕೆ ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವಂತಿಲ್ಲ, ಹೈಕೋರ್ಟ್​ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​​ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶ ಪಾಲನೆ ಮಾಡದವರಿಗೆ ಶಾಲೆಗೆ ಪ್ರವೇಶವಿಲ್ಲ.

ಹಠ ಮಾಡಲು ಅವರಿಗೆ ಹೇಗೆ ಹಕ್ಕಿದೆಯೋ ಹಾಗೆಯೇ ಒಳಗೆ ಬಿಡದೇ ಇರಲು ಕಾನೂನೂ ಸಹ ಇದೆ ಎಂದು ಹೇಳಿದ್ದಾರೆ.

ಒಂದಷ್ಟು ಜನರು ಈ ರೀತಿ ಮತ್ತೆ ಪ್ರಚಾರಕ್ಕೆ ತಂದು ದೇಶದ ಅಶಾಂತಿ ಹಾಳುಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ವೋಟ್​​ಬ್ಯಾಂಕ್​ ರಾಜಕಾರಣ ಮಾಡುವ ಪ್ರಯತ್ನ ಇದರಲ್ಲೂ ನಡೆದಿದೆ ಎಂದು ಆರೋಪಿಸಿದ್ದಾರೆ.

ಕರೊನಾದಿಂದ ಮುಕ್ತರಾದ ಬೆನ್ನಲ್ಲೇ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಸರ್ಕಾರ ಮುಂದಾಗಿತ್ತು, ಆಗ ವಿರೋಧ ಪಕ್ಷಗಳು ಈ ಕೆಲಸ ಮಾಡಿವೆ. ಇದನ್ನು ನಾವು ಬರೀ ಹಿಜಾಬ್ ಅಂತಾ ನೋಡುವುದಲ್ಲ, ಇದನ್ನು ಅಶಾಂತಿ ಸೃಷ್ಟಿ ಮಾಡುವ ಒಂದಿಷ್ಟು ಗುಂಪು, ಆ ಗುಂಪಿಗೆ ಬೆಂಬಲ ನೀಡುವ ಒಂದಷ್ಟು ರಾಜಕೀಯ ಪಾರ್ಟಿಗಳು ಇವೆ.ಇವೆರಡನ್ನೂ ನಾವು ನೋಡಬೇಕಿದೆ.

ಹೈ ಕೋರ್ಟ್ ಆದೇಶದ ನಂತರವೂ ಕೆಲ ಪಕ್ಷ ಹಿಜಾಬ್ ಪರ ನಿಂತಿವೆ.ವಿರೋಧ ಪಕ್ಷಗಳು‌ ಅಸೆಂಬ್ಲಿಯಲ್ಲಿ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ.ಒಂದು ಕಡೆ ವೋಟ್ ಬ್ಯಾಂಕ್ ರಾಜಕಾರಣ ಮತ್ತೊಂದು ಕಡೆ ಮುಸ್ಲಿಂಮರನ್ನ ಸಮಾಜದಿಂದ ಪ್ರತ್ಯೇಕ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು