ಕೊಪ್ಪಳ: ರಾಮನ ಬಂಟ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಕೆಳಗೆ 500 ಕೆಜಿ ತೂಕವಿರುವ, 9 ಅಡಿ ಎತ್ತರದ ಪಂಚಲೋಹದ ಶ್ರೀರಾಮನ ಮೂರ್ತಿಯನ್ನು ಜ.22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ಕಾರ್ಯದಂದೆ ಪ್ರತಿಷ್ಠಾಪಿಸಲಾಗುತ್ತದೆ.
ಈ ಪಂಚಲೋಹದ ಶ್ರೀರಾಮನ ಮೂರ್ತಿಯನ್ನು ಬೆಂಗಳೂರಿನ ಖಾಸಗಿ ಸಂಸ್ಥೆಯವರು ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ತಯಾರು ಮಾಡಿಸಿದ್ದಾರೆ.
ಮೊದಲು ರಾಮನ ಮೂರ್ತಿ ಸ್ವೀಕರಿಸಲು ಮುಜರಾಯಿ ಇಲಾಖೆ ಅಧಿಕಾರಿಗಳು ನಿರಾಕರಿಸಿದ್ದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ರಾಮನ ಮೂರ್ತಿ ಸ್ವೀಕರಿಸುವಂತೆ ಹೇಳಿದ ಬಳಿಕ, ಮುಜರಾಯಿ ಇಲಾಖೆ ಕಾರ್ಯದರ್ಶಿ ಸೂಚನೆ ಮೇರೆಗೆ ಸ್ವೀಕರಿಸಿದ್ದಾರೆ.