News Karnataka Kannada
Monday, April 29 2024
ಕೊಪ್ಪಳ

ಅಡ್ವಾಣಿ ಬಿಜೆಪಿ ಕಟ್ಟಿ ಕಟ್ಟಿ ಸತ್ತ, ಮೋದಿ ಪ್ರಧಾನಿ ಆಗಿಬಿಟ್ಟ- ನಾಲಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ

Advani built BJP and died, Modi became PM: Senior Congress MLA
Photo Credit : News Kannada

ಕೊಪ್ಪಳ: ಕಾಂಗ್ರೆಸ್‌ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿಸಭೆಯೊಂದರಲ್ಲಿ ಆಡಿದ ಮಾತು ಈಗ ಪರ ವಿರೋಧ ಚರ್ಚೆ ಹುಟ್ಟುಹಾಕಿದೆ. ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿಆಯೋಜಿಸಿದ್ದ ಸಭೆಯಲ್ಲಿ, ನೀವು ಮಂತ್ರಿ ಆಗುವುದು ಯಾವಾಗ ಎಂದು ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು ನೀವು ದುಖಃ ಪಡುವ ಅಗತ್ಯವಿಲ್ಲ. ಒಮ್ಮೊಮ್ಮೆ ಮಂತ್ರಿ ಆಗೋದಕ್ಕೆ ಆಗುವುದಿಲ್ಲ. ಅದಕ್ಕೆ ಅದೃಷ್ಟ ಬೇಕು ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸಿದ್ದರಾಮಯ್ಯ ಜೆಡಿಎಸ್‌ ನಿಂದ ಕಾಂಗ್ರೆಸ್‌ಗೆ ವಲಸೆ ಬಂದು ಎರಡು ಭಾರಿ ಸಿಎಂ ಆಗಿದ್ದಾರೆ.‌ ಮೂಲ ಕಾಂಗ್ರೆಸಿಗರು ಈ ಬಗ್ಗೆ ಏನು ಅಂದುಕೊಳ್ಳಬಹುದು. ಇದೆಲ್ಲಾ ಮನುಷ್ಯನ ಅದೃಷ್ಟ. ನನ್ನ ಹಿಂದೆ ಓಡಾಡಿದವರೆಲ್ಲಾ ಮಂತ್ರಿ ಆಗಿದ್ದಾರೆ.‌ ಅವರ ಅಪ್ಪಂದಿರ ಜತೆ ನಾನು ಕೆಲಸ‌ ಮಾಡಿದವನು. ಇವರು, ಈಗ ನಮ್ಮ ಮುಂದೆ ಧಿಮಾಕು ಮಾಡ್ಕೊಂಡು ಓಡುತ್ತಿದ್ದಾರೆ. ಎಸ್‌.ಆರ್‌ ಬೊಮ್ಮಾಯಿ ಅವರ ಅವಧಿಯಲ್ಲಿ ನಾನು ಎಂಎಲ್‌ಎ, ಎಂಪಿ ಆಗಿದ್ದೆ. ದೇವೆಗೌಡರ ಕ್ಯಾಬಿನೆಟ್‌ನಲ್ಲಿ ನಾನು ಮಿನಿಸ್ಟರ್ ಆಗಿದ್ದವನು.‌ ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೊದು ಅವನ ಹಣೆ ಬರಹದಲ್ಲಿ ಬರೆದಿತ್ತು ಮುಖ್ಯಮಂತ್ರಿ ಆಗಿಬಿಟ್ಟ ಎಂದು ಹೇಳಿದ್ದಾರೆ.‌ ಈ ಮೊದಲು, ಎಲ್.ಕೆ.ಅಡ್ವಾಣಿ ಬಿಜೆಪಿ ಕಟ್ಟಿದ್ದು, ಮೋದಿ ಪ್ರಧಾನ ಮಂತ್ರಿ ಆಗ್ಬಿಟ್ಟ ಎಂದು ಬಿಜೆಪಿ ಹಿರಿಯ ನಾಯಕರ ಬಗ್ಗೆ ಏಕ ವಚನದಲ್ಲಿ ಬಸವರಾಜ ರಾಯರೆಡ್ಡಿ ಮಾತನಾಡಿದ್ದಾರೆ.

ಮುಂದುವರಿದು ಎಲ್ ಕೆ ಅಡ್ವಾಣಿ ಬಿಜೆಪಿ ಕಟ್ಟಿ ಕಟ್ಟಿ ಸತ್ತ, ನರೇಂದ್ರ ಮೋದಿ ಪ್ರಧಾನಿ ಆಗಿಬಿಟ್ಟ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ನಾಲಗೆ ಹರಿಬಿಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು