ಕೊಪ್ಪಳ: ಮಸೀದಿಗೆ ಮಂಗಳಾರತಿ ಮಾಡಿರುವ ಆರೋಪದಲ್ಲಿ ಐವರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಂಗಾವತಿಯಲ್ಲಿ ಸೆ. 28 ರಂದು ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಂಗಳಾರತಿ ಮಾಡಿದ್ದ ಐವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಗಲಭೆ ಸೃಷ್ಟಿಸುವ ಹುನ್ನಾರ ಆರೋಪದಲ್ಲಿ ಶ್ರೀಕಾಂತ ಹೊಸಕೇರಿ, ಕುಮಾರ ಹೂಗಾರ, ಚನ್ನಬಸವ, ಸಂಗಮೇಶ ಅಯೋಧ್ಯೆ, ಯಮನೂರು ರಾಠೋಡ ಎಂಬುವವರ ವಿರುದ್ಧ ಸೆಪ್ಟೆಂಬರ್ 30ರಂದು ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ ಬಳಿ ಬರುತ್ತಿದ್ದಂತೆಯೇ ಬಾಗಿಲಿಗೆ ಆರತಿ ಬೆಳಗಿದ್ದಾರೆ. ಗಲಭೆ ಮಾಡುವ ಉದ್ದೇಶದಿಂದ ಜೈ ಶ್ರೀರಾಮ್, ಭಾರತ ಮಾತಾಕೀ ಜೈ, ಗವಿ ಗಂಗಾಧರೇಶ್ವರ ಮಹಾರಾಜ್ ಕೀ ಜೈ ಎಂದು ಷೋಷಣೆಗಳನ್ನು ಕೂಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.