News Karnataka Kannada
Thursday, May 02 2024
ಕೊಪ್ಪಳ

ಓಲೈಕೆ, ಧರ್ಮದ ರಾಜಕಾರಣ ಮಾಡ್ತಾ ಇರೋದು ಕಾಂಗ್ರೆಸ್: ಶೋಭಾ ಕರಂದ್ಲಾಜೆ

Shobha Karandlaje likely to be appointed as BJP state unit president in place of Kateel
Photo Credit : News Kannada

ಕೊಪ್ಪಳ: ಮಂಗಳೂರು, ಬೆಂಗಳೂರು, ಮೈಸೂರಿನ ಜೈಲಿನಲ್ಲಿದ್ದ ಪಿ.ಎಫ್.ಐ ಕಾರ್ಯಕರ್ತರನ್ನ ಸಿದ್ದರಾಮಯ್ಯ ಸರ್ಕಾರ ಬಿಡುಗಡೆ ಮಾಡಿತು. ಮುಸ್ಲಿಂ ಮತಗಳ ಓಲೈಕೆಗೆ ಕಾಂಗ್ರೆಸ್ ರಾಜಕಾರಣ ಮಾಡ್ತಾ ಇದೆ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಈ ಕುರಿತು ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವು ಒಲೈಕೆಯಂಥ ರಾಜಕಾರಣ ಮಾಡುವುದಿಲ್ಲ. ಶಾದಿ ಭಾಗ್ಯ ಒಂದು ವರ್ಗಕ್ಕೆ ಮಾತ್ರ ಯಾಕೆ ಕೊಟ್ರು. ಓಲೈಕೆ, ಧರ್ಮದ ರಾಜಕಾರಣ ಮಾಡ್ತಾ ಇರೋದು ಕಾಂಗ್ರೆಸ್ ನವರದು ಎಂದು ಕಿಡಿಕಾರಿದ್ದಾರೆ.

ಅಹಿಂಸ ಹೆಸರಿನಲ್ಲಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದರು. ಅವರು ಅಧಿಕಾರಕ್ಕೆ ಬಂದ ತಕ್ಷಣವೇ ಮಾಡಿದ್ದು, ಟಿಪ್ಪು ಜಯಂತಿ ಮಾಡಿದರು. ವ್ಯಕ್ತಿ ಪೂಜೆ ಮಾಡೋದು ಮುಸ್ಲಿಂ ಧರ್ಮದಲ್ಲಿ ಇಲ್ಲ. ಆದರೆ ಶಾಲಾ ಮಕ್ಕಳಲ್ಲಿ ಜಾತಿ ತಂದರು, ವೀರಶೈವ ಧರ್ಮ ಹೊಡೆಯೋಕೆ ನೋಡಿದರು.ಇಡೀ ವ್ಯವಸ್ಥೆ ಹಾಳು ಮಾಡುವ ಕೆಲಸ ಸಿದ್ದರಾಮಯ್ಯ ಮಾಡಿದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಟಿಪ್ಪುನ್ನು ಹೊಡೆದಂತೆ ಸಿದ್ದರಾಮಯ್ಯನವರನ್ನು ಹೊಡೆಯುವ ಅಶ್ವಥ್ ನಾರಾಯಣ ಹೇಳಿರುವ ವಿಚಾರವಾಗಿ ಮಾತನಾಡಿ ನೂರಕ್ಕೆ ನೂರು ತಪ್ಪು, ಆ ರೀತಿ ಯಾರೂ ಹೇಳಬಾರದು. ಪ್ರಜಾ ತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತನಾಡುವ ಅವಕಾಶ ಇದೆ. ಅವರವರ ಪಕ್ಷ ಅವರವರ ಸಿದ್ದಾಂತದ ಮೇಲೆ ಮಾತನಾಡುತ್ತೆ. ಸಿದ್ದಾಂತದ ಆಧಾರದ ಮೇಲೆ ಪಕ್ಷ ಕಟ್ಟಬೇಕು. ಅಶ್ವಥ್ ನಾರಾಯಣ ಮಾತನಾಡಿದ್ದು ತಪ್ಪು. ನಮ್ಮ ಪಕ್ಷದಲ್ಲಿ ಇಂತಹ ಸಿದ್ದಾಂತ ಇಲ್ಲ ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮ ಸರಕಾರವಿದೆ. ಅಭಿವೃದ್ಧಿ ಕೆಲಸಕ್ಕೆ ಡಬಲ್ ಇಂಜಿನ್ ಸರಕಾರ ಬರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಹಿಂದೆ ಭಾರತ ಪ್ರಧಾನಿಗಳು ವಿದೇಶಕ್ಕೆ ಹೋದರೆ ಸಾಲಕ್ಕಾಗಿ, ಭಿಕ್ಷೆಗಾಗಿ ಬರುತ್ತಿದ್ದಾರೆ ಎನ್ನುತ್ತಿದ್ದರು.

ಆದರೆ ಈಗ ಭಾರತ ಪ್ರಬಲವಾಗಿದೆ. ಉಕ್ರೇನ್ ರಷ್ಯಾದ ಯುದ್ದದಲ್ಲಿ ಭಾರತದ ಪ್ರಧಾನಿ ಹೇಳಿದಂತಾಗಿದೆ. ಪ್ರಧಾನಿಯವರು ಈಗಲೂ ೨೦೨೪ ರ ಚುನಾವಣೆಯ ಬಗ್ಗೆ ಮಾತನಾಡುತ್ತಿಲ್ಲ. ಪ್ರಧಾನಿಯವರು ಅಭಿವೃದ್ದಿ ಗುರಿಯಾಗಿಟ್ಟು ಕೊಂಡು ಮಾತನಾಡುತ್ತಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು