ಕೊಪ್ಪಳ: ಮಳೆಯಿಲ್ಲದೆ ಬಳಲಿ ಬೆಂಡಾಗಿದ್ದ ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ವರ್ಷಧಾರೆಯಾಗುತ್ತಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ಭಾಗದಲ್ಲಿ ತಡರಾತ್ರಿ ಧಾರಾಕಾರ ಮಳೆ ಸುರಿದಿದ್ದು ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ.
ಗ್ರಾಮದ ಹತ್ತಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಯಲಬುರ್ಗಾ ತಾಲೂಕಿನ ಹಲವು ಜಮೀನುಗಳಿಗೆ ನೀರು ನುಗ್ಗಿದೆ.