ಗಂಗಾವತಿ: ರಾಜ್ಯ ಕಾಂಗ್ರೆಸ್ ನಲ್ಲಿ ಬಣರಾಜಕೀಯ ಜೋರಾಗಿದೆ. ಮೊನ್ನೆ ಮೊನ್ನೆಯಷ್ಟೆ ಗೃಹಸಚಿವ ಪರಮೇಶ್ವರ ಅವರ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ., ಸತೀಶ್ ಜಾರಕಿಹೊಳಿ ಮೊದಲಾದವರು ಊಟಕ್ಕೆ ಹೋಗಿರುವುದು ಗುಪ್ತ ಚರ್ಚೆಗೆಂದು ಸುದ್ದಿಯಾಗಿತ್ತು. ಇದೀಗ ಸತೀಶ್ ಜಾರಕಿಹೊಳಿ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ರಾಜಕಾರಣದಲ್ಲಿ ಯಾರ ನಡುವೆಯೂ ಸಮಸ್ಯೆ ಇಲ್ಲ. ಅಲ್ಲಿ ನಾನೇ ಹೆಡ್ ಆಫ್ ದಿ ಡಿಪಾರ್ಟ್ ಮೆಂಟ್. ಹೀಗಾಗಿ ಯಾರ ಮೇಲೆಯೂ ಸಿಟ್ಟಾಗುವ ಪ್ರಸಂಗ ಬರುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆನೆಗೊಂದಿ ಗ್ರಾಮದಲ್ಲಿ ಭಾನುವಾರ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ವೇಳೆ ಅವರು ಮಾತನಾಡಿದರು.
ಬೆಳಗಾವಿಯಲ್ಲಿ ಎಲ್ಲವೂ ಸರಿಯಾಗಿದೆ. ನಾವು ಎಲ್ಲರೂ ಒಂದಾಗಿದ್ದೇವೆ ಎಂದರು.